ಜಮ್ಮು: ಇಲ್ಲಿನ ಸಿಧ್ರಾ ಪ್ರದೇಶದಲ್ಲಿರುವ ‘ತವಿ ವಿಹಾರ’ದಲ್ಲಿ ಮಂಗಳವಾರ ರಾತ್ರಿ ಒಟ್ಟು ಆರು ಮೃತದೇಹಗಳು ಪತ್ತೆಯಾಗಿವೆ. ‘ಇವರೆಲ್ಲಾ ವಿಷಪ್ರಾಸನದಿಂದ ಅಸುನೀಗಿರಬಹುದು ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
‘ಪ್ರಕರಣದ ತನಿಖೆಗಾಗಿ ಗ್ರಾಮಾಂತರ ವಿಭಾಗದ ಎಸ್ಪಿ ಸಂಜಯ್ ಶರ್ಮಾ ನೇತೃತ್ವದಲ್ಲಿ ನಾಲ್ಕು ಸದಸ್ಯರನ್ನೊಳಗೊಂಡ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ’ ಎಂದು ಜಮ್ಮು ಪೊಲೀಸ್ ವರಿಷ್ಠಾಧಿಕಾರಿ ಚಂದನ್ ಕೊಹ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.