ಕೃಷ್ಣಗಂಜ್: ‘ಬಿಹಾರದ ಕೃಷ್ಣಗಂಜ್ನ ಮನೆಯೊಂದರಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದ್ದು, ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು.
‘ಸೋಮವಾರ ಮುಂಜಾನೆ ಸುಮಾರು 3 ಗಂಟೆಗೆ ಸಲಾಂ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ನೂರ್ ಆಲಂ ತನ್ನ ಮಕ್ಕಳೊಂದಿಗೆ ಮನೆಯಲ್ಲಿ ಮಲಗಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿ ಅವಘಡದಲ್ಲಿ ನೂರು ಆಲಂ ಮತ್ತು ಅವರ ಇಬ್ಬರು ಹೆಣ್ಣು ಮಕ್ಕಳು ಮತ್ತು ಇಬ್ಬರು ಗಂಡು ಮಕ್ಕಳು ಸಾವಿಗೀಡಾಗಿದ್ದಾರೆ’ ಎಂದು ಉಪವಿಭಾಗದ ಮ್ಯಾಜಿಸ್ಟ್ರೇಟ್ ಶಹನವಾಜ್ ಅಹ್ಮದ್ ನಿಯಾಜಿ ಮಾಹಿತಿ ನೀಡಿದರು.
‘ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸಿದರು’ ಎಂದು ಅವರು ಹೇಳಿದರು.
‘ಈ ಬಗ್ಗೆ ತನಿಖೆ ಆರಂಭಿಸಿದ್ದೇವೆ. ಸಂಪೂರ್ಣ ತನಿಖೆ ಪೂರ್ಣಗೊಂಡ ಬಳಿಕವೇ ಬೆಂಕಿ ಹೇಗೆ ಕಾಣಿಸಿಕೊಂಡಿತು ಎಂಬುದರ ಬಗ್ಗೆ ತಿಳಿಯಲಿದೆ. ಸದ್ಯ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿ ಅನ್ವರ್ ಜಾವೇದ್ ಅನ್ಸಾರಿ ಅವರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.