ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್ಇ) 12ನೇ ತರಗತಿಯ ಫಲಿತಾಂಶ ಪ್ರಕಟಿಸಿದ ಬಳಿಕವೇ ಪದವಿ ಕೋರ್ಸ್ಗಳ ಪ್ರವೇಶಕ್ಕೆ ಅಂತಿಮ ದಿನಾಂಕ ನಿಗದಿಪಡಿಸುವಂತೆ ವಿಶ್ವವಿದ್ಯಾಲಯಗಳಿಗೆ ಸೂಚಿಸಲಾಗಿದೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷ ಜಗದೀಶ್ ಕುಮಾರ್ ಬುಧವಾರ ತಿಳಿಸಿದ್ದಾರೆ.
ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ ಪ್ರಕಟಿಸದಿದ್ದರೂ ಕೆಲ ವಿಶ್ವವಿದ್ಯಾಲಯಗಳು ಪ್ರವೇಶ ಪ್ರಕ್ರಿಯೆ ಆರಂಭಿಸಿವೆ. ಇದನ್ನು ಪ್ರಸ್ತಾಪಿಸಿರುವ ಅವರು, ಮಂಡಳಿಯು ಫಲಿತಾಂಶ ಪ್ರಕಟಿಸುವ ಮೊದಲೇ ಪದವಿ ಕೋರ್ಸ್ಗಳ ಪ್ರವೇಶಕ್ಕೆ ಅಂತಿಮ ದಿನಾಂಕ ನಿಗದಿಪಡಿಸಿದರೆ ಕೆಲ ವಿದ್ಯಾರ್ಥಿಗಳು ಅವಕಾಶ ವಂಚಿತರಾಗಬಹುದು ಎಂದು ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಫಲಿತಾಂಶ ಪ್ರಕಟವಾದ ನಂತರ ಪ್ರವೇಶ ಪ್ರಕ್ರಿಯೆ ಆರಂಭಿಸಲು ವಿಶ್ವವಿದ್ಯಾಲಯಗಳಿಗೆ ಸೂಚಿಸಬೇಕು ಎಂದುಸಿಬಿಎಸ್ಇ ಕಳೆದ ವಾರ ಯುಜಿಸಿಗೆ ಮನವಿ ಮಾಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.