ನವದೆಹಲಿ: ಇರಾನ್ನಲ್ಲಿಕೋವಿಡ್–19 ವ್ಯಾಪಕವಾಗಿ ಹರಡುತ್ತಿದ್ದು ಅಲ್ಲಿಂದ 58 ಭಾರತೀಯರನ್ನು ವಾಯುಪಡೆಯ ವಿಶೇಷ ವಿಮಾನದಲ್ಲಿ ಭಾರತಕ್ಕೆ ಕರೆತರಲಾಗಿದೆ.
ನಿನ್ನೆ ಭಾರತೀಯರನ್ನು ಕರೆತರಲು ಸಿ–17 ಗ್ಲೋಬ್ ಮಾಸ್ಟರ್ ಸೇನಾ ವಿಮಾನವನ್ನು ಇರಾನ್ಗೆ ಕಳುಹಿಸಲಾಗಿತ್ತು. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ವಿಮಾನ ಘಾಜಿಯಾಬಾದ್ನ ಸೇನಾ ವಾಯು ನೆಲೆಗೆ ಬಂದಿಳಿಯಿತು. ಇದೀಗ ಮೊದಲ ಹಂತದ ಕಾರ್ಯಾಚರಣೆ ಯಶಸ್ವಿಯಾಗಿದ್ದು ಎರಡನೇ ಹಂತದ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ವಿದೇಶಾಂಗ ಸಚಿವರು ಟ್ವೀಟ್ ಮಾಡಿದ್ದಾರೆ.
ನೂರಕ್ಕೂ ಹೆಚ್ಚು ಭಾರತೀಯರು ಇರಾನ್ನಲ್ಲಿ ನೆಲೆಸಿದ್ದು ಅವರನ್ನೂ ಒಂದೆರಡು ದಿನಗಳಲ್ಲಿ ಕರೆತರಲಾಗುವುದು ಎಂದು ಉನ್ನತ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.