ADVERTISEMENT

ತಮಿಳುನಾಡು: ನಟ ರಜನಿಕಾಂತ್‌ ಭೇಟಿಯಾದ ಶಶಿಕಲಾ, ಆರೋಗ್ಯ ವಿಚಾರಣೆ

ಪಿಟಿಐ
Published 7 ಡಿಸೆಂಬರ್ 2021, 13:01 IST
Last Updated 7 ಡಿಸೆಂಬರ್ 2021, 13:01 IST
ವಿ.ಕೆ. ಶಶಿಕಲಾ ಅವರು ನಟ ರಜನಿಕಾಂತ್‌ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. –ಎಎನ್‌ಐ ಟ್ವಿಟರ್ ಚಿತ್ರ
ವಿ.ಕೆ. ಶಶಿಕಲಾ ಅವರು ನಟ ರಜನಿಕಾಂತ್‌ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. –ಎಎನ್‌ಐ ಟ್ವಿಟರ್ ಚಿತ್ರ   

ಚೆನ್ನೈ: ಎಐಎಡಿಎಂಕೆ ಮಾಜಿ ನಾಯಕಿ ವಿ.ಕೆ. ಶಶಿಕಲಾ ಅವರು ನಟ ರಜನಿಕಾಂತ್‌ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಆರೋಗ್ಯ ವಿಚಾರಿಸಿದ್ದಾರೆ.

ಇತ್ತೀಚೆಗೆ ರಜನಿಕಾಂತ್‌ ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಶಸ್ತ್ರಚಿಕಿತ್ಸೆ ಬಳಿಕ ಅವರು ಚೇತರಿಸಿಕೊಂಡಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.ಕೆಲ ದಿನಗಳ ಹಿಂದೆಅವರು ದಾದಾ ಸಾಹೇಬ್​ ಪಾಲ್ಕೆ ಪ್ರಶಸ್ತಿಯನ್ನು ಸ್ವೀಕರಿಸಿದ್ದರು.

ಭ್ರಷ್ಟಾಚಾರದ ಆರೋಪದಲ್ಲಿ ಜೈಲು ಶಿಕ್ಷೆ ಅನುಭವಿಸಿ ಮನೆಗೆ ಮರಳಿರುವ ಶಶಿಕಲಾ ಅವರನ್ನು ಕಳೆದ ಜನವರಿಯಲ್ಲಿ ಎಐಡಿಎಂಕೆ ಪಕ್ಷದಿಂದ ಉಚ್ಛಾಟನೆ ಮಾಡಲಾಗಿತ್ತು.

ADVERTISEMENT

ಸದ್ಯ ತಮಿಳುನಾಡಿನಲ್ಲಿ ಪ್ರತಿದಿನ ಸಾಮಾಜಿಕ ಜಾಲತಾಣಗಳಲ್ಲಿಶಶಿಕಲಾ ಅವರ ರಾಜಕೀಯ ಮರುಪ್ರವೇಶದ ಕುರಿತು ಭಾರಿ ಚರ್ಚೆಗಳು ನಡೆಯುತ್ತಿವೆ. ಇದರಿಂದ ಅವರು ರಾಜಕೀಯದಲ್ಲಿ ಎರಡನೇ ಇನ್ನಿಂಗ್ಸ್‌ ಆರಂಭಿಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.