ಚೆನ್ನೈ: ಮಾಜಿ ಐಎಎಸ್ ಅಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ತಮಿಳುನಾಡಿನ ಕಾಂಗ್ರೆಸ್ ಕೇಂದ್ರ ಕಚೇರಿ ಸತ್ಯಮೂರ್ತಿ ಭವನದಲ್ಲಿ ಕಾಂಗ್ರೆಸ್ನ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಅಳಗಿರಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ತಮಿಳುನಾಡು ಉಸ್ತುವಾರಿ ದಿನೇಶ್ ಗುಂಡೂರಾವ್, ಎಐಸಿಸಿ ಕಾರ್ಯದರ್ಶಿಗಳಾದ ಸಂಜಯ್ ದತ್ ಮತ್ತು ಸಿರಿವೆಲ್ಲಾ ಪ್ರಸಾದ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ಗೆ ಸೇರಿದರು.
ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ 2009ರಲ್ಲಿ ನಾಗರಿಕ ಸೇವೆಗೆ ಆಯ್ಕೆಯಾಗಿದ್ದರು. 2019ರ ಸೆಪ್ಟೆಂಬರ್ನಲ್ಲಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.