ADVERTISEMENT

ಬಿಜೆಪಿ ತೆಕ್ಕೆಗೆ ನಿವೃತ್ತ ನ್ಯಾಯಮೂರ್ತಿ ಹಾಗೂ ಐಪಿಎಸ್ ಅಧಿಕಾರಿ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2021, 19:31 IST
Last Updated 1 ಮಾರ್ಚ್ 2021, 19:31 IST
ಬಿಜೆಪಿ ಸೇರಿದ ಕೇರಳ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್. ರವೀಂದ್ರನ್ ಮತ್ತು ಕೇರಳದ ಮಾಜಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವೇಣುಗೋಪಾಲ್ ಕೆ. ನಾಯರ್
ಬಿಜೆಪಿ ಸೇರಿದ ಕೇರಳ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್. ರವೀಂದ್ರನ್ ಮತ್ತು ಕೇರಳದ ಮಾಜಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವೇಣುಗೋಪಾಲ್ ಕೆ. ನಾಯರ್   

ತಿರುವನಂತಪುರ: ಕೇರಳ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್. ರವೀಂದ್ರನ್ ಮತ್ತು ಕೇರಳದ ಮಾಜಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವೇಣುಗೋಪಾಲ್ಕೆ. ನಾಯರ್ ಅವರು ಬಿಜೆಪಿಗೆ ಸೇರ್ಪಡೆಯಾದರು. ಕೇರಳ ಹೈಕೋರ್ಟ್‌ನ ಮತ್ತೊಬ್ಬ ನಿವೃತ್ತ ನ್ಯಾಯಾಧೀಶ ವಿ. ಚಿದಂಬರೇಶ್‌ ಕೂಡ ಶೀಘ್ರದಲ್ಲೇ ಪಕ್ಷಕ್ಕೆ ಸೇರುವ ನಿರೀಕ್ಷೆಯಿದೆ.

ಮೆಟ್ರೊಮ್ಯಾನ್ ಇ. ಶ್ರೀಧರನ್, ನಿವೃತ್ತ ಪೊಲೀಸ್ ಮಹಾನಿರ್ದೇಶಕ ಜೇಕಬ್‌ ಥಾಮಸ್ ಅವರು ಇತ್ತೀಚೆಗೆ ಬಿಜೆಪಿ ಸೇರಿದ್ದರು. ಇವರೆಲ್ಲರೂ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಸಾಧ್ಯತೆಯಿದೆ. ರವೀಂದ್ರನ್ ಹಾಗೂ ವೇಣುಗೋಪಾಲ್ ನಾಯರ್ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಪಕ್ಷದ ಸದಸ್ಯತ್ವವನ್ನು ಪಡೆದರು. ಕೇರಳದಲ್ಲಿ ಅನೇಕ ಉನ್ನತ ವ್ಯಕ್ತಿಗಳು ಶೀಘ್ರದಲ್ಲೇ ಪಕ್ಷಕ್ಕೆ ಸೇರಲಿದ್ದಾರೆ ಎಂದು ಬಿಜೆಪಿ ರಾಜ್ಯ ನಾಯಕತ್ವವು ಈ ಮೊದಲೇ ಘೋಷಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT