ಚಂಡೀಗಢ: ಭಾರತ್ ಜೋಡೊ ಯಾತ್ರೆಯಲ್ಲಿ ಕೇಂದ್ರದ ಮಾಜಿ ಸಚಿವಜಿತೇಂದ್ರ ಸಿಂಗ್ ಅಹಿರ್ವಾರ್ ಅವರು ರಾಹುಲ್ ಗಾಂಧಿಗೆ ಶೂ ಲೇಸ್ ಕಟ್ಟಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಹರಿಯಾಣದಲ್ಲಿ ಸಾಗುತ್ತಿರುವ ಪಾದಯಾತ್ರೆ ಸಂದರ್ಭದಲ್ಲಿಜಿತೇಂದ್ರ ಸಿಂಗ್ ಅಹಿರ್ವಾರ್ ಅವರು ರಾಹುಲ್ ಗಾಂಧಿ ಎದುರು ಮಂಡಿಯೂರಿ ಕುಳಿತು ಶೂ ಲೇಸ್ ಕಟ್ಟಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.
ಬಿಜೆಪಿಯ ಅಮಿತ್ ಮಾಳವೀಯ ಅವರು ವಿಡಿಯೊವನ್ನು ಟ್ವೀಟ್ ಮಾಡಿ, ರಾಹುಲ್ ನಡೆಯನ್ನು ಖಂಡಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಜಿತೇಂದ್ರ ಸಿಂಗ್ ಅವರು, ನಾನು ನನ್ನ ಶೂ ಲೇಸ್ ಕಟ್ಟಿಕೊಳ್ಳುತ್ತಿದ್ದೆ ರಾಹುಲ್ ಗಾಂಧಿಯವರದ್ದಲ್ಲ ಎಂದು ಹೇಳಿದ್ದಾರೆ. ಬಿಜೆಪಿ ಮಾಡಿರುವ ಟ್ವೀಟ್ ಸಂಪೂರ್ಣ ಸುಳ್ಳು, ಪಾದಯಾತ್ರೆ ಸಮಯದಲ್ಲಿ ನನ್ನ ಶೂ ಲೇಸ್ ಕಟ್ಟಿಕೊಳ್ಳುತ್ತಿದ್ದೆ ಇದೇ ಸಮಯದಲ್ಲಿ ರಾಹುಲ್ ಗಾಂಧಿ ಅಲ್ಲೇ ನಿಂತಿದ್ದರು ಎಂದುಜಿತೇಂದ್ರ ಸಿಂಗ್ ಹೇಳಿದ್ದಾರೆ.
ಈ ಘಟನೆ ಸಂಬಂಧ ಬಿಜೆಪಿ ಮುಖಂಡರು ಕ್ಷಮೆಯಾಚಿಸಿ, ವಿಡಿಯೊ ಡಿಲೀಟ್ಮಾಡಬೇಕು ಇಲ್ಲವಾದಲ್ಲಿ ಕಾನೂನು ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.
ಸದ್ಯ ಯಾತ್ರೆ ಹರಿಯಾಣದಲ್ಲಿ ಸಾಗುತ್ತಿದೆ. ನಿನ್ನೆ ರಾಹುಲ್ ಗಾಂಧಿಅವರನ್ನುಹರಿಯಾಣದ ಕಾಂಗ್ರೆಸ್ ನಾಯಕರು ಸ್ಥಳದಲ್ಲಿ ಹಾಜರಿದ್ದು ಅದ್ಧೂರಿಯಾಗಿ ಸ್ವಾಗತಿಸಿದರು.
ಹರಿಯಾಣದ ಮಾಜಿ ಸಿಎಂ ಭೂಪೇಂದ್ರ ಸಿಂಗ್ ಹೂಡಾ, ರಣದೀಪ್ ಸಿಂಗ್ ಸುರ್ಜೆವಾಲಾ, ದೀಪೇಂದ್ರ ಸಿಂಗ್ ಹೂಡಾ, ಹರಿಯಾಣ ಕಾಂಗ್ರೆಸ್ ಮುಖ್ಯಸ್ಥ ಉದಯ್ ಬಾನ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.