ADVERTISEMENT

ಮಹಾರಾಷ್ಟ್ರದ ಮಾಜಿ ಶಾಸಕ ಶಿಂದೆ ಬಣಕ್ಕೆ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2022, 12:54 IST
Last Updated 29 ನವೆಂಬರ್ 2022, 12:54 IST
   

ಮುಂಬೈ: ಶಿವಸೇನಾದ ಉದ್ಧವ್‌ ಠಾಕ್ರೆ ಬಣದಲ್ಲಿ ಗುರುತಿಸಿಕೊಂಡಿದ್ದ ಮಹಾರಾಷ್ಟ್ರದ ಮಾಜಿ ಶಾಸಕ ಕೃಷ್ಣ ಹೆಗ್ಡೆ ಅವರು ಮಂಗಳವಾರ ಮುಖ್ಯಮಂತ್ರಿ ಏಕನಾಥ ಶಿಂಧೆ ಬಣಕ್ಕೆ ಸೇರ್ಪಡೆಗೊಂಡಿದ್ದಾರೆ.

ಐದು ವರ್ಷಗಳ ಹಿಂದೆ ಹೆಗ್ಡೆ ಅವರು ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರಿದ್ದರು. ಶಿವಸೇನಾ, ‘ಮಹಾ ವಿಕಾಸ ಅಘಾಡಿ’ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಹೆಗ್ಡೆ ಅವರು ಶಿವಸೇನಾಗೆ ಸೇರ್ಪಡೆಗೊಂಡಿದ್ದರು. ಅವರು ಉದ್ಧವ್‌ ಠಾಕ್ರೆ ಬಣದಲ್ಲಿ ಸಕ್ರಿಯರಾಗಿದ್ದರು.

ಸೋಮವಾರ ರಾತ್ರಿ ಹೆಗ್ಡೆ ಅವರು ಬಾಳಾಸಾಹೇಬಾಚಿ ಶಿವಸೇನಾದ ಮುಖ್ಯಸ್ಥರೂ ಆಗಿರುವ ಏಕನಾಥ ಶಿಂದೆ ಅವರನ್ನು ಭೇಟಿಯಾಗಿ ಅವರ ಬಣಕ್ಕೆ ಸೇರ್ಪಡೆಗೊಂಡಿದ್ದಾರೆ.

ADVERTISEMENT

ಬಳಿಕ ಮಾತನಾಡಿದ ಹೆಗ್ಡೆ ಅವರು, ‘ನನ್ನನ್ನು ಬಾಳಾಸಾಹೇಬಾಚಿ ಶಿವಸೇನಾದ ವಕ್ತಾರರನ್ನಾಗಿ ಆಯ್ಕೆ ಮಾಡಿರುವುದಕ್ಕೆ ಶಿಂದೆ ಅವರಿಗೆ ಧನ್ಯವಾದಗಳು’ ಎಂದಿದ್ದಾರೆ. ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅವರಿಗೂ ಧನ್ಯವಾದ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.