ADVERTISEMENT

ತ್ರಿಪುರಾದ ಮಾಜಿ ಸಿಎಂ ಬಿಪ್ಲವ್‌ ಕಾರು ಅಪಘಾತ: ಅಪಾಯದಿಂದ ಪಾರು

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2023, 16:22 IST
Last Updated 20 ಫೆಬ್ರುವರಿ 2023, 16:22 IST
ಬಿಪ್ಲವ್‌
ಬಿಪ್ಲವ್‌   

ನವದೆಹಲಿ: ತ್ರಿಪುರಾದ ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯಸಭೆ ಸದಸ್ಯ ಬಿಪ್ಲವ್‌ ಕುಮಾರ್‌ ದೇವ್‌ ಅವರ ಕಾರು ಅಪಘಾತಕ್ಕಿಡಾಗಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ.

ಸೋಮವಾರ ಹರಿಯಾಣದ ಪಾಣಿಪತ್‌ನಲ್ಲಿ ಅವರ ಕಾರು ಅಪಘಾತಕ್ಕೀಡಾಗಿದೆ ಎಂದು ಬಿಪ್ಲವ್‌ ಕಚೇರಿ ಮೂಲಗಳು ತಿಳಿಸಿವೆ.

ಹರಿಯಾಣ ಬಿಜೆಪಿ ರಾಜ್ಯ ಉಸ್ತುವಾರಿ ಆಗಿರುವ ಅವರು ದೆಹಲಿಯಿಂದ ಚಂಡೀಗಢಕ್ಕೆ ಹೋಗುತ್ತಿದ್ದಾಗ ಪಾಣಿಪತ್ ಸಮೀಪದ ರಸ್ತೆಯಲ್ಲಿ ನಿಂತಿದ್ದ ವಾಹನಕ್ಕೆ ಅವರ ಕಾರು ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.