ADVERTISEMENT

ಕೇಂದ್ರದ ಮಾಜಿ ಸಚಿವ ಅರ್ಜುನ್‌ ಚರಣ್‌ ಸೇಥಿ ನಿಧನ

ಪಿಟಿಐ
Published 9 ಜೂನ್ 2020, 6:31 IST
Last Updated 9 ಜೂನ್ 2020, 6:31 IST
   

ಭುವನೇಶ್ವರ: ಕೇಂದ್ರದ ಮಾಜಿ ಸಚಿವ ಅರ್ಜುನ್‌ ಚರಣ್‌ ಸೇಥಿ ಸೋಮವಾರ ಇಲ್ಲಿ ನಿಧನರಾದರು. ಅವರಿಗೆ 79 ವರ್ಷವಾಗಿತ್ತು.

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಸೇಥಿ ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಭದ್ರಕ್‌ ಲೋಕಸಭೆ ಕ್ಷೇತ್ರದಿಂದ ಎಂಟು ಬಾರಿ ಆಯ್ಕೆಯಾಗಿದ್ದರು. ಅಟಲ್‌ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ 2000 ರಿಂದ 2004ವರೆಗೆ ಕೇಂದ್ರ ಜಲಸಂಪನ್ಮೂಲ ಸಚಿವರಾಗಿದ್ದರು.

ADVERTISEMENT

ಮೃದುಭಾಷಿಯಾಗಿದ್ದ ಅವರು, ಯುವವಯಸ್ಸಿನಲ್ಲಿಯೇ ಸಾಮಾಜಿಕ ಸೇವೆ ಮತ್ತು ರಾಜಕೀಯ ಕ್ಷೇತ್ರದತ್ತ ಆಸಕ್ತಿ ಬೆಳೆಸಿಕೊಂಡಿದ್ದರು. ಶಾಸಕ, ಸಂಸದರಾಗಿ ಸೇವಾ ಬದ್ಧತೆಯಿಂದ ಗಮನಸೆಳೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.