ಲಖನೌ: ‘ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ’ ಎಂದು ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆಯು (ಎಸ್ಜಿಪಿಜಿಐಎಂಎಸ್) ಮಂಗಳವಾರ ತಿಳಿಸಿದೆ.
‘ಕಲ್ಯಾಣ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಮಂಗಳವಾರ ಸಂಜೆಯಿಂದ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದೆ. ತಜ್ಞರು ಅವರ ಆರೋಗ್ಯ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ’ ಎಂದು ಆಸ್ಪತ್ರೆ ಪ್ರಕಟಣೆ ಹೇಳಿದೆ.
‘ಸಿಸಿಎಂ, ಹೃದ್ರೋಗ, ನರರೋಗ, ನೆಪ್ರೊಲಜಿ ಸೇರಿದಂತೆ ವಿವಿಧ ವಿಭಾಗಗಳ ತಜ್ಞರು ಅವರ ಆರೋಗ್ಯದ ಎಲ್ಲಾ ಅಂಶಗಳನ್ನು ನಿಕಟವಾಗಿ ಗಮನಿಸುತ್ತಿದ್ದಾರೆ. ಎಸ್ಜಿಪಿಜಿಐಎಂಎಸ್ ನಿರ್ದೇಶಕರಾದ ಆರ್.ಕೆ ಧಿಮನ್ ಅವರು ಕಲ್ಯಾಣ್ ಸಿಂಗ್ ಅವರಿಗೆ ನೀಡುತ್ತಿರುವ ಚಿಕಿತ್ಸೆ ಮೇಲೆ ನಿಗಾ ಇಟ್ಟಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಾಜಸ್ಥಾನದ ಮಾಜಿ ರಾಜ್ಯಪಾಲರೂ ಆಗಿರುವ ಕಲ್ಯಾಣ್ ಸಿಂಗ್ ಅವರು ಸೋಂಕು ಮತ್ತಿತರ ಆರೋಗ್ಯ ಸಮಸ್ಯೆಯಿಂದಾಗಿ ಜುಲೈ 4 ರಂದು ಆಸ್ಪತ್ರೆಗೆ ದಾಖಲಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.