ಮಥುರಾ: ವಿಶ್ವ ಹಿಂದೂ ಪರಿಷತ್ ಮಾಜಿ ಅಧ್ಯಕ್ಷ ವಿಷ್ಣು ಹರಿ ದಾಲ್ಮಿಯಾ ಬುಧವಾರ ದೆಹಲಿ ನಿವಾಸದಲ್ಲಿ ಕೊನೆಯುಸಿರೆಳೆದರು.
ಒಂದು ತಿಂಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ 91 ವರ್ಷ ವಯಸ್ಸಾಗಿತ್ತು.
ರಾಮ ಜನ್ಮಭೂಮಿ ಆಂದೋಲನ ಮತ್ತು ಮಥುರಾದ ಶ್ರೀಕೃಷ್ಣ ಜನ್ಮಸ್ಥಾನ ದೇವಾಲಯಗಳ ಪುನರುಜ್ಜೀವನದಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಮಥುರಾ ಹಾಗೂ ಇತರ ಕಡೆ ಗೋಶಾಲೆ ತೆರೆದಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.