ADVERTISEMENT

ನಕ್ಸಲ್‌ ದಾಳಿಗೆ ನಾಲ್ವರು ಯೋಧರು ಹುತಾತ್ಮ

ಪಿಟಿಐ
Published 4 ಏಪ್ರಿಲ್ 2019, 18:55 IST
Last Updated 4 ಏಪ್ರಿಲ್ 2019, 18:55 IST

ರಾಯಪುರ: ಛತ್ತೀಸಗಡದಲ್ಲಿ ಗುರುವಾರ ನಡೆದ ನಕ್ಸಲರ ದಾಳಿಯಲ್ಲಿ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) ನಾಲ್ವರು ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳಿರುವಾಗ ಈ ದಾಳಿ ನಡೆದಿದೆ.

ಕಾಂಕೇರ್‌ ಜಿಲ್ಲೆಯ ಮಹ್ಲಾ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಕ್ಸಲರು, ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಬಿಎಸ್‌ಎಫ್‌ನ 114ನೇ ಬೆಟಾಲಿಯನ್‌ ಮತ್ತು ಜಿಲ್ಲಾ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿತ್ತು ಎಂದು ನಕ್ಸಲ್‌ ನಿಗ್ರಹ ದಳದಡಿಐಜಿ ಸುಂದರರಾಜ್‌ ತಿಳಿಸಿದ್ದಾರೆ.

ADVERTISEMENT

ನಕ್ಸಲರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ. ಕಾಂಕೇರ್‌, ಮಹಾಸಮುಂದ್‌, ರಾಜನಾಂದಗಾವ್‌ ಲೋಕಸಭಾ ಕ್ಷೇತ್ರಗಳಿಗೆ ಇದೇ 18ರಂದು ಚುನಾವಣೆ (ಎರಡನೇ ಹಂತ) ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.