ತಿರುವನಂತಪುರ: ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ವಯನಾಡ್ ಕ್ಷೇತ್ರದ ಕಾಂಗ್ರೆಸ್ನ ನಾಲ್ವರು ಮುಖಂಡರು ಇತ್ತೀಚೆಗೆ ಪಕ್ಷ ತ್ಯಜಿಸಿದ್ದು ಕಾಂಗ್ರೆಸ್ಗೆ ತಲೆನೋವಾಗಿತ್ತು. ಈ ಬೆಳವಣಿಗೆಯಿಂದ ಎಚ್ಚೆತ್ತುಕೊಂಡ ಪಕ್ಷದ ನಾಯಕರು ಹಾನಿಯನ್ನು ಸರಿಪಡಿಸುವ ಕಾರ್ಯ ಆರಂಭಿಸಿದ್ದು, ಮುನಿಸಿಕೊಂಡಿದ್ದ ಒಬ್ಬ ಮುಖಂಡರನ್ನು ಮರಳಿ ಪಕ್ಷಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.
ಅಷ್ಟೇ ಅಲ್ಲದೆ ಸಿಪಿಎಂನ ಸ್ಥಳೀಯ ನಾಯಕರೊಬ್ಬರು ಸಹ ಕಾಂಗ್ರೆಸ್ಗೆ ಸೇರ್ಪಡೆಯಾಗಿರುವುದು ಪಕ್ಷದ ನಾಯಕರಿಗೆ ಹೆಚ್ಚಿನ ಸಮಾಧಾನವನ್ನು ತಂದಿದೆ.
ಕಾಂಗ್ರೆಸ್ನ ಹಿರಿಯ ಮುಖಂಡ ರಾಹುಲ್ ಗಾಂಧಿ ಅವರ ಲೋಕಸಭಾ ಕ್ಷೇತ್ರದಲ್ಲೇ ನಾಯಕರಲ್ಲಿ ಅಸಮಾಧಾನ ಮೂಡಿದ್ದರಿಂದ ಕಾಂಗ್ರೆಸ್ಗೆ ಇರಿಸುಮುರುಸಾಗಿತ್ತು. ಪಕ್ಷ ಬಿಟ್ಟು ಹೋಗಿದ್ದ ಹಿರಿಯ ಮುಖಂಡಕೆ.ಕೆ. ವಿಶ್ವನಾಥನ್ ಅವರುಪಕ್ಷಕ್ಕೆ ಮರಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.