ADVERTISEMENT

ಕಾರು ಅಪಘಾತ: ನಾಲ್ವರು ಸಾವು

ಪಿಟಿಐ
Published 28 ಜನವರಿ 2023, 14:20 IST
Last Updated 28 ಜನವರಿ 2023, 14:20 IST
.
.   

ಕಾಲಿಂಪೊಂಗ್: ಮದುವೆ ಸಮಾರಂಭ ಮುಗಿಸಿ ವೇಗವಾಗಿ ಬರುತ್ತಿದ್ದ ಕಾರು ಸೇತುವೆಗೆ ಡಿಕ್ಕಿ ಹೊಡೆದು ನದಿಗೆ ಉರುಳಿದ ಪರಿಣಾಮ ನಾಲ್ವರು ಮೃತಪಟ್ಟು ಅನೇಕ ಮಂದಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಕಾಲಿಂಪೊಂಗ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಅಪಘಾತವು ಸುಮಾರು ಮಧ್ಯರಾತ್ರಿ 1 ಗಂಟೆಗೆ ರಾಷ್ಟ್ರೀಯ ಹೆದ್ದಾರಿ 31ರಲ್ಲಿ ನಡೆದಿದೆ. ಒಂಭತ್ತು ಜನರಿದ್ದ ವಾಹನವು ವೇಗವಾಗಿ ಬಂದು ಸೇತುವೆಗೆ ಡಿಕ್ಕಿ ಹೊಡೆದು ನದಿಗೆ ಉರುಳಿಬಿದ್ದಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಗಾಯಗೊಂಡ ಏಳು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ADVERTISEMENT

ನೆರೆಯ ಜಿಲ್ಲೆ ಜಲ್‌ಪೈಗುರಿಯ ಬನರಾತ್ ಪ್ರದೇಶದಿಂದ ಮದುವೆ ಮುಗಿಸಿಕೊಂಡು ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.