ADVERTISEMENT

ನಾಲ್ವರು ಉಗ್ರರ ಎನ್‌ಕೌಂಟರ್

ಪಿಟಿಐ
Published 18 ಮೇ 2019, 19:03 IST
Last Updated 18 ಮೇ 2019, 19:03 IST

ಶ್ರೀನಗರ: ಯೋಧ ಔರಂಗಜೇಬ್ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರ ಸೇರಿದಂತೆ ನಾಲ್ವರನ್ನು ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಶನಿವಾರ ಹತ್ಯೆ ಮಾಡಲಾಗಿದೆ. ಇವರಲ್ಲಿಮೂವರು ಹಿಜ್ಬುಲ್ ಮುಜಾಹಿದೀನ್ ಸಂಘಟನೆಗೆ ಸೇರಿದವರು.

ನಿರ್ದಿಷ್ಟ ಮಾಹಿತಿ ಆಧಾರದ ಮೇಲೆ ಪೊಲೀಸರು ಹಾಗೂ ಭದ್ರತಾ ಪಡೆ ಯೋಧರು ಶನಿವಾರ ಬೆಳಗಿನ ಜಾವ,ಪುಲ್ವಾಮಾ ಹಾಗೂ ಬಾರಾಮುಲ್ಲಾದಸೊಪೋರ್ ಪಟ್ಟಣದಲ್ಲಿ ಶೋಧ ಕಾರ್ಯ ನಡೆಸಿದರು. ಈ ವೇಳೆ ಅಡಗಿದ್ದ ಉಗ್ರರು ಗುಂಡಿನ ದಾಳಿ ಆರಂಭಿಸಿದರು. ಪೊಲೀಸರು, ಯೋಧರು ಇದಕ್ಕೆ ತಕ್ಕಪ್ರತಿ ದಾಳಿ ನಡೆಸಿದರು ಎಂದು ಪೊಲೀಸ್ ವಕ್ತಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT