ADVERTISEMENT

ಛತ್ತೀಸಗಡ: ನಾಲ್ವರು ನಕ್ಸಲರ ಬಂಧನ

ಪಿಟಿಐ
Published 30 ಮೇ 2021, 9:16 IST
Last Updated 30 ಮೇ 2021, 9:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನಾರಾಯಣಪುರ: ‘ಸುಧಾರಿತ ಸ್ಫೋಟಕ ಸಾಮಗ್ರಿಗಳನ್ನು ಸ್ಫೋಟಿಸಿದ ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ನಾಲ್ವರು ನಕ್ಸಲರನ್ನು ಛತ್ತೀಸಗಡದ ನಾರಾಯಣಪುರ ಜಿಲ್ಲೆಯಲ್ಲಿ ಬಂಧಿಸಲಾಗಿದೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದರು.

‘ಇರಕ್ಭಟ್ಟಿ ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿ ಶೋಧ ಕಾರ್ಯಾಚರಣೆ ನಡೆಸಿದ ವೇಳೆ ಈ ಬಂಧನ ನಡೆದಿದೆ. ಬಂಧಿತರಿಂದ ಬಂದೂಕು, ಸ್ಪೋಟಕಗಳು ಮತ್ತು ವಿದ್ಯುತ್‌ ತಂತಿಗಳನ್ನು ವಶಪಡಿಸಿಕೊಳ್ಳಲಾಗಿದೆ’ ಅವರು ಹೇಳಿದರು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಇರಕ್ಭಟ್ಟಿ-ಕೊಹ್ಕಮೆಟಾ ರಸ್ತೆ ಬಳಿ ನಡೆದ ಐಇಡಿ ಸ್ಪೋಟ ಮತ್ತು 2019ರಲ್ಲಿ ರಸ್ತೆ ಕಾಮಗಾರಿಯಲ್ಲಿ ತೊಡಗಿದ್ದ ಮೂರು ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಈ ನಾಲ್ವರು ಭಾಗಿಯಾಗಿದ್ದಾರೆ ಎನ್ನಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.