ನವದೆಹಲಿ: ‘ಕ್ರಿಮಿನಲ್ ಪ್ರಕರಣ, ನೇರ ಮತ್ತು ಪರೋಕ್ಷ ತೆರಿಗೆ, ಭೂ ಸ್ವಾಧೀನ ಹಾಗೂ ಅಪಘಾತ ಪರಿಹಾರ ಸಂಬಂಧ ಸಲ್ಲಿಕೆಯಾಗುವ ಅರ್ಜಿಗಳ ವಿಚಾರಣೆಗಾಗಿ ನಾಲ್ಕು ವಿಶೇಷ ನ್ಯಾಯಪೀಠಗಳನ್ನು ರಚಿಸಲಾಗಿದ್ದು, ಇವು ಮುಂದಿನ ವಾರದಿಂದ ಕಾರ್ಯನಿರ್ವಹಿಸಲಿವೆ’ ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಬುಧವಾರ ತಿಳಿಸಿದ್ದಾರೆ.
ಈ ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ತುರ್ತು ವಿಚಾರಣೆ ಪಟ್ಟಿಗೆ ಸೇರಿಸುವ ಸಲುವಾಗಿ ವಕೀಲರು ಕೋರ್ಟ್ ನಂ 4ರ ಬಳಿ ಸರತಿ ಸಾಲಿನಲ್ಲಿ ನಿಂತಿದ್ದರು. ಇದನ್ನು ಗಮನಿಸಿದ ಅವರು ನಾಲ್ಕು ವಿಶೇಷ ನ್ಯಾಯಪೀಠಗಳನ್ನು ರಚಿಸುತ್ತಿರುವುದಾಗಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.