ADVERTISEMENT

ಹರಿಯಾಣ: ವಿಷಾನಿಲ ಸೇವಿಸಿ ನಾಲ್ವರು ಸಾವು

ಪಿಟಿಐ
Published 3 ಆಗಸ್ಟ್ 2022, 16:29 IST
Last Updated 3 ಆಗಸ್ಟ್ 2022, 16:29 IST
ಪ್ರಾತಿನಿಧಿಕ ಚಿತ್ರ 
ಪ್ರಾತಿನಿಧಿಕ ಚಿತ್ರ    

ಚಂಡೀಗಡ: ಹರಿಯಾಣದ ಜಜ್ಜರ್‌ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ತ್ಯಾಜ್ಯದ ಟ್ಯಾಂಕ್‌ ಸ್ವಚ್ಛಗೊಳಿಸುವಾಗ ವಿಷಾನಿಲ ಸೇವಿಸಿ ನಾಲ್ವರು ವಲಸೆ ಕಾರ್ಮಿಕರು ಬುಧವಾರ ಮೃತಪಟ್ಟಿದ್ದಾರೆ. ಇಬ್ಬರು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದು ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಮೃತರೆಲ್ಲರೂ ಉತ್ತರ ಪ್ರದೇಶದವರು. ಆಸ್ಪತ್ರೆಗೆ ದಾಖಲಿಸಿರುವವರ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ವಾಹನಗಳಿಗಾಗಿ ಅನಿಲದ ಕಿಟ್‌ ಸಿದ್ಧಪಡಿಸುವ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದೆ’ ಎಂದು ಜಜ್ಜರ್‌ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಸೀಂ ಅಕ್ರಂ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT