ಲಖನೌ: ಉತ್ತರ ಪ್ರದೇಶದ ರಾಯ್ ಬರೇಲಿಯ ದೇವರಾಣಿಯ ಬಳಿ 3 ಬೈಕುಗಳಲ್ಲಿ 14 ಮಂದಿ ಸವಾರಿ ಮಾಡಿ ಸಿಕ್ಕಿಬಿದ್ದಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೊದಲ್ಲಿ ಒಂದು ಬೈಕಿನಲ್ಲಿ 6, ಮತ್ತೆರಡು ಬೈಕುಗಳಲ್ಲಿ ತಲಾ 4 ಮಂದಿ ಸವಾರಿ ಮಾಡುತ್ತಿರುವುದು ಕಂಡುಬಂದಿದೆ.
ಈ ಕುರಿತಂತೆ ನಮಗೆ ಮಾಹಿತಿ ಬಂದ ಕೂಡಲೇ ಬೈಕ್ಗಳನ್ನು ಜಪ್ತಿ ಮಾಡಲಾಗಿದೆ. ಈ ಕುರಿತಂತೆ ಹೆಚ್ಚುವರಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಯ್ಬರೇಲಿ ಎಸ್ಎಸ್ಪಿ ಅಖಿಲೇಶ್ ಕುಮಾರ್ ಚೌರಾಸಿಯಾ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.