ನವದೆಹಲಿ: ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರ ಆರೋಪದಡಿ ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ನಬಮ್ ತುಕಿ ಅವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ.
ಕೋಲ್ಕತ್ತದ ಸಾಲ್ಟ್ ಲೇಕ್ ಪ್ರದೇಶದಲ್ಲಿ ಕೇಂದ್ರೀಯ ವಿದ್ಯಾಲಯ ಶಾಲೆಯ ಕಾಂಪೌಂಡ್ ನಿರ್ಮಾಣದ ಗುತ್ತಿಗೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣವನ್ನು ಸಿಬಿಐ ಅಧಿಕಾರಿಗಳು ಕೈಗೆತ್ತಿಗೊಂಡಿದ್ದಾರೆ.
‘ಕೇಂದ್ರೀಯ ವಿದ್ಯಾಲಯ ಶಾಲೆಯ ಕಾಂಪೌಂಡ್ ನಿರ್ಮಾಣಕ್ಕೆ ಟೆಂಡರ್ ಅನ್ನು ಕರೆಯದೆ, ಕಾಮಗಾರಿ ಗುತ್ತಿಗೆಯನ್ನು ಆಗಿನ ಪಿಡಬ್ಲ್ಯೂಡಿ ಸಚಿವರಾಗಿದ್ದ ತುಕಿ ಅವರ ಕುಟುಂಬದ ಸದಸ್ಯರಿಗೆ ನೀಡಲಾಗಿತ್ತು. ಇದರಿಂದಾಗಿ ರಾಜ್ಯ ಸರ್ಕಾರಕ್ಕೆ ಹಾನಿ ಉಂಟಾಗಿದೆ. ಆದರೆ ಸಚಿವರ ಸಂಬಂಧಿಕರು ಲಾಭಗಳಿಸಿದ್ದಾರೆ’ ಎಂದು ಸಿಬಿಐ, ಪ್ರಾಥಮಿಕ ವರದಿಯಲ್ಲಿ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.