ADVERTISEMENT

ಜ್ಞಾನವಾಪಿಯಲ್ಲಿ ಶಿವಲಿಂಗ ಪೂಜೆಗೆ ಅವಕಾಶ ನೀಡಿ: ನ್ಯಾಯಾಲಯಕ್ಕೆ ಅರ್ಜಿ

ವಾರಾಣಸಿ ನ್ಯಾಯಾಲಯಕ್ಕೆ ಹೊಸ ಅರ್ಜಿ

​ಪ್ರಜಾವಾಣಿ ವಾರ್ತೆ
Published 18 ಮೇ 2022, 15:42 IST
Last Updated 18 ಮೇ 2022, 15:42 IST
ಜ್ಞಾನವಾಪಿ ಮಸೀದಿ
ಜ್ಞಾನವಾಪಿ ಮಸೀದಿ   

ಲಖನೌ: ಶಿವಲಿಂಗ ಪತ್ತೆಯಾಗಿದೆ ಎನ್ನಲಾದ ಜ್ಞಾನವಾಪಿ ಮಸೀದಿಯ ಸಂಕೀರ್ಣದಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕೋರಿ ವಾರಾಣಸಿ ನ್ಯಾಯಾಲಯಕ್ಕೆ ಹೊಸ ಅರ್ಜಿಯೊಂದು ಸಲ್ಲಿಕೆಯಾಗಿದೆ.

ಈ ಸಂಬಂಧ ಬುಧವಾರ ಅರ್ಜಿ ಸಲ್ಲಿಸಿರುವ ರೇಖಾ ಪಾಠಕ್, ಮಂಜು ವ್ಯಾಸ್ ಮತ್ತು ಸೀತಾ ಸಾಹು ಅವರು, 'ಮಸೀದಿಯ ನೆಲಮಹಡಿಯಲ್ಲಿ ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸಬೇಕು. ಅಲ್ಲದೆ, ಆ ಜಾಗದಲ್ಲಿ ಬೇರೆ ಏನಾದರೂ ಇದೆಯೇ ಎಂಬುದನ್ನು ತಿಳಿಯಲು ಅವಶೇಷಗಳನ್ನು ತೆರವು ಮಾಡಬೇಕು' ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಈ ಅರ್ಜಿಯನ್ನು ನ್ಯಾಯಾಲಯವು ಗುರುವಾರ ವಿಚಾರಣೆ ನಡೆಸುವ ಸಾಧ್ಯತೆಯಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದ್ದಾರೆ.

ಸದ್ಯ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಇದೆ ಎನ್ನಲಾದ ಸ್ಥಳಕ್ಕೆ ರಕ್ಷಣೆ ನೀಡಿ, ನಮಾಜ್ ಮಾಡಲು ಅವಕಾಶ ಕಲ್ಪಿಸುವಂತೆ ಸುಪ್ರೀಂ ಕೋರ್ಟ್ ವಾರಾಣಸಿ ಜಿಲ್ಲಾಡಳಿತಕ್ಕೆ ಈಗಾಗಲೇ ಸೂಚಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.