ಇಂದೋರ್: ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಮೊಟ್ಟೆ, ಚಿಕನ್ ಸೇರಿದಂತೆ ಮಾಂಸಾಹಾರ ಅಡುಗೆಯನ್ನು ಸೇರಿಸಬೇಕು ಎನ್ನುವ ಅಭಿಪ್ರಾಯವು ಸಾಮಾನ್ಯವಾಗಿ ಕೇಳಿಬರುತ್ತದೆ. ಆದರೆ, ಮಧ್ಯಪ್ರದೇಶದ ಸರ್ಕಾರಿ ಶಾಲೆಯೊಂದರ ಬಿಸಿಯೂಟದಲ್ಲಿ ಕಪ್ಪೆ ಸಾಂಬರ್ ಮಾಡಲಾಗಿದೆ.
ಮಧ್ಯಪ್ರದೇಶದ ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಿಕೆಯ ವೇಳೆ ಅಡುಗೆಯವರ ಅಜಾಗರೂಕತೆಯಿಂದ ಸಾಂಬರ್ನಲ್ಲಿ ಕಪ್ಪೆ ಬಿದ್ದಿದೆ. ಸಾಂಬರ್ ಪಾತ್ರೆಯೊಳಗೆ ಸತ್ತ ಕಪ್ಪೆಯು ತೇಲುತ್ತಿರುವ ವಿಡಿಯೊ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಕಾಂಗ್ರೆಸ್ ಪಕ್ಷದ ಅಧಿಕೃತ ಜಾಲತಾಣ ಖಾತೆಯಲ್ಲಿ ಕೂಡ ಈ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ.
ಬಿಜೆಪಿ ನಾಯಕರು ಮತ್ತು ಸಚಿವರು ತಮ್ಮ ಮಕ್ಕಳಿಗೆ ಕಪ್ಪೆ ಸಾಂಬರ್ ತಿನ್ನಿಸುತ್ತಾರೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ತಮ್ಮ ಮಕ್ಕಳಿಗೆ ಉತ್ತಮ ಸೌಲಭ್ಯ ಒದಗಿಸುವ ಬಿಜೆಪಿ ನಾಯಕರು, ಬಡವರ ಮಕ್ಕಳಿಗೆ ಮಾತ್ರ ಕಪ್ಪೆ ಸಾಂಬರ್ ನೀಡುತ್ತಾರೆ. ಅವರಿಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದೆ.
ಕಪ್ಪೆ ಸಾಂಬರ್ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ವ್ಯಾಪಕ ಟೀಕೆ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.