ನವದೆಹಲಿ: ಇಟಲಿಯ ರಾಜಧಾನಿ ರೋಮ್ನಲ್ಲಿ ಇದೇ 30ರಿಂದ ನಡೆಯಲಿರುವ ಜಿ–20 ಶೃಂಗಸಭೆಯಲ್ಲಿ ಅಫ್ಗನ್ ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸಲು ಜಾಗತಿಕವಾಗಿ ಸಂಘಟಿತ ಕಾರ್ಯತಂತ್ರದ ಅವಶ್ಯಕತೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ ಎಂದು ಮೂಲಗಳು ಭಾನುವಾರ ಹೇಳಿವೆ.
ಈ ವೇಳೆ ಹವಾಮಾನ ಬದಲಾವಣೆ ಮತ್ತು ಕೋವಿಡ್ ಪಿಡುಗಿನ ಸವಾಲುಗಳನ್ನು ಎದುರಿಸುವ ಬಗ್ಗೆಯೂ ಮಾತನಾಡಲಿದ್ದಾರೆ ಎಂದೂ ಹೇಳಲಾಗಿದೆ.
ಓದಿ:ವ್ಯಂಗ್ಯಚಿತ್ರಕಾರ ಆರ್.ಕೆ.ಲಕ್ಷ್ಮಣ್ ನೂರನೇ ಜನ್ಮದಿನ: ಕೊಡುಗೆ ನೆನಪಿಸಿದ ಮೋದಿ
ಮೋದಿ ಅವರು ಗುರುವಾರ ಅಥವಾ ಶುಕ್ರವಾರ ಇಟಲಿ ಮತ್ತು ಸ್ಕಾಟ್ಲೆಂಡ್ ಪ್ರವಾಸ ಆರಂಭಿಸುವ ಸಾಧ್ಯತೆ ಇದೆ ಎಂದೂ ಮೂಲಗಳು ತಿಳಿಸಿವೆ.
ಶೃಂಗಸಭೆಯಲ್ಲಿ ಅಫ್ಗಾನಿಸ್ತಾನದ ಪರಿಸ್ಥಿತಿಯು ಪ್ರಮುಖವಾಗಿ ಪ್ರಸ್ತಾಪವಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.