ADVERTISEMENT

ನ್ಯಾಯಾಲಯದಿಂದ ಹಿಂತಿರುಗುತ್ತಿದ್ದ ಗ್ಯಾಂಗ್‌ಸ್ಟರ್‌‌ ದುಷ್ಕರ್ಮಿಗಳ ಗುಂಡಿಗೆ ಹತ

ಪಿಟಿಐ
Published 19 ಸೆಪ್ಟೆಂಬರ್ 2022, 14:18 IST
Last Updated 19 ಸೆಪ್ಟೆಂಬರ್ 2022, 14:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜೈಪುರ: ನ್ಯಾಯಾಲಯಕ್ಕೆ ಹಾಜರಾದ ಬಳಿಕ ಹಿಂತಿರುಗುತ್ತಿದ್ದ ಗ್ಯಾಂಗ್‌ಸ್ಟರ್‌ನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿರುವ ಘಟನೆ ರಾಜಸ್ಥಾನದಿಂದ ವರದಿಯಾಗಿದೆ.

ರಾಜಸ್ಥಾನದ ನಾಗೌರ್‌ ಜಿಲ್ಲೆಯಲ್ಲಿ ಸೋಮವಾರ ಹಾಡಹಗಲೇ ಸಾರ್ವಜನಿಕರ ಎದುರಲ್ಲೇ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಗ್ಯಾಂಗ್‌ಸ್ಟರ್‌ನ ಮೂವರು ಮಿತ್ರರು ಹಾಗೂ ವಕೀಲರೊಬ್ಬರು ಗಾಯಗೊಂಡಿದ್ದಾರೆ. ಈ ಪೈಕಿ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಜೋಧಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಗ್ಯಾಂಗ್‌ಸ್ಟರ್‌‌ ಸಂದೀಪ್ ಸೇಥಿ ಎಂಬಾತನೇ ಹತ್ಯೆಗೀಡಾಗಿದ್ದಾನೆ. ಆತ ಸೆಪ್ಟೆಂಬರ್ 12ರಿಂದ ಜಾಮೀನಿನ ಮೇರೆಗೆ ಜೈಲಿನಿಂದ ಹೊರ ಬಂದಿದ್ದು, ವಿಚಾರಣೆಗೆಂದು ನಾಗೌರ್ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದನು.

ಆತ ನ್ಯಾಯಲಯದಿಂದ ಹೊರಬರುತ್ತಿದ್ದಂತೆ ಬೈಕ್‌ನಲ್ಲಿ ಬಂದ ನಾಲ್ಕೈದು ಅಪರಿಚಿತ ದುಷ್ಕರ್ಮಿಗಳು ಗ್ಯಾಂಗ್‌ಸ್ಟರ್ ಮೇಲೆ ಗುಂಡಿನ ಸುರಿಮಳೆಗೈದರು. ಇದರಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಮೀನಾ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಸೇಥಿ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ 25 ಪ್ರಕರಣಗಳು ದಾಖಲಾಗಿದ್ದವು.

ಪೊಲೀಸರು ತನಿಖೆ ಆರಂಭಿಸಿದ್ದು, ದುಷ್ಕರ್ಮಿಗಳ ಪತ್ತೆಗಾಗಿ ಸಿಸಿಟಿವಿ ದೃಶ್ಯ ಪರಿಶೀಲಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.