ತಿರುವನಂತಪುರ: ಸಮೀಪದಅಟ್ಟಿಂಗಲ್ನಲ್ಲಿ ಸುಮಾರು ₹ 20 ಕೋಟಿ ಮೌಲ್ಯದ 500 ಕೆ.ಜಿ ಗಾಂಜಾವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳು ಜಾರ್ಖಂಡ್ ಮತ್ತು ಪಂಜಾಬ್ನವಾಗಿದ್ದಾರೆ.ಮೈಸೂರಿನಲ್ಲಿ ನೆಲೆಸಿದ್ದ ಕೇರಳದವರು ಗಾಂಜಾ ಸಾಗಿಸುತ್ತಿರುವ ಕುರಿತು ದೊರೆತ ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.. ರಾಷ್ಟ್ರೀಯ ಸಾರಿಗೆ ಪರವಾನಗಿ ಹೊಂದಿದ ಲಾರಿಯನ್ನು ತಡೆದಾಗ ಗಾಂಜಾ ಪತ್ತೆಯಾಗಿದೆ ಎಂದು ಅಬಕಾರಿ ಇನ್ಸ್ಪೆಕ್ಟರ್ ಅನಿಲ್ಕುಮಾರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.