ನವದೆಹಲಿ: ಮಾಜಿ ಕ್ರೆಕೆಟಿಗ ಗೌತಮ್ ಗಂಭೀರ್ ಅವರನ್ನು ಪೂರ್ವ ದೆಹಲಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯಾಗಿಬಿಜೆಪಿಯು ಸೋಮವಾರ ರಾತ್ರಿ ಘೋಷಿಸಿದೆ.
ದೆಹಲಿಯ ಏಳು ಲೋಕಸಭೆ ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಿಗೆ ಬಿಜೆಪಿಸೋಮವಾರ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿತು. ಪೂರ್ವ ದೆಹಲಿಯಿಂದ ಮಾಜಿ ಕ್ರಿಕೆಟಿಕ ಗೌತಮ್ ಗಂಭೀರ್ ಆಭ್ಯರ್ಥಿಯಾದರೆ, ಮೀನಾಕ್ಷಿ ಲೇಖಿ ನವದೆಹಲಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. 2014ರಲ್ಲೂ ಅವರು ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು.
ಇದನ್ನೂ ಓದಿ: ಬಿಜೆಪಿ ಸೇರಿದಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್
ಕ್ರಿಕೆಟ್ ರಂಗದಲ್ಲಿ ಹೆಸರು ಮಾಡಿದ್ದ ಗೌತಮ್ ಗಂಭೀರ್ ಅವರು ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದರು. ಅವರು ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಅಂತಿಮವಾಗಿ ಅವರು ಪೂರ್ವ ದೆಹಲಿಯ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.