ನವದೆಹಲಿ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು ಕಾಂಗ್ರೆಸ್ನ ಹಿರಿಯ ಮುಖಂಡರನ್ನು ಬುಧವಾರ ಭೇಟಿ ಮಾಡಿ, ಚರ್ಚೆ ನಡೆಸಿದ್ದಾರೆ.
ರಾಜ್ಯ ಸಚಿವ ಸಂಪುಟ ಪುನರ್ರಚನೆ ಮಾಡುವ ಸಾಧ್ಯತೆಗಳಿವೆ. ಹಾಗಾಗಿ ಮುಖ್ಯಮಂತ್ರಿ ಗೆಹಲೋತ್ ಅವರ ಈ ಭೇಟಿ ಕುತೂಹಲ ಕೆರಳಿಸಿದೆ.
ಮುಖಂಡ ರಾಹುಲ್ ಗಾಂಧಿ ನಿವಾಸದಲ್ಲಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಗೆಹಲೋತ್ ಅವರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ಈ ವೇಳೆ ರಾಹುಲ್ ಗಾಂಧಿ ಅವರು ಇರಲಿಲ್ಲ. ಮುಖಂಡರಾದ ಅಜಯ್ ಮಾಕೇನ್ ಹಾಗೂ ಕೆ.ಸಿ.ವೇಣುಗೋಪಾಲ್ ಇದ್ದರು ಎಂದು ಮೂಲಗಳು ಹೇಳಿವೆ.
ಸಂಭಾವ್ಯ ವಿಸ್ತರಣೆಯಲ್ಲಿ ಸಚಿನ್ ಪೈಲಟ್ ಬೆಂಬಲಿಗರು ಸೇರಿದಂತೆ ಎಲ್ಲ ಗುಂಪುಗಳಿಗೆ ಪ್ರಾತಿನಿಧ್ಯ ನೀಡಬೇಕಾದ ಒತ್ತಡದಲ್ಲಿ ಗೆಹಲೋತ್ ಇದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರೊಂದಿಗಿನ ಭೇಟಿ ಹಲವು ಚರ್ಚೆಗಳಿಗೆ ಕಾರಣವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.