ನವದೆಹಲಿ: ವೃದ್ಧ ಮುಸ್ಲಿಂ ವ್ಯಕ್ತಿಯನ್ನು ಥಳಿಸಿದ್ದ ಪ್ರಕರಣದ ಮೊಕದ್ದಮೆ ಸಂಬಂಧ ವಿಚಾರಣೆಯಲ್ಲಿ ಭಾಗವಹಿಸುವಂತೆ ಟ್ವಿಟರ್ ಸಂಸ್ಥೆಯ ಭಾರತದ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ಅವರಿಗೆ ಉತ್ತರ ಪ್ರದೇಶದ ಗಾಜಿಯಾಬಾದ್ ಪೊಲೀಸರು ಗುರುವಾರ ರಾತ್ರಿ ನೋಟಿಸ್ ನೀಡಿದ್ದಾರೆ.
7 ದಿನಗಳ ಒಳಗೆ ಲೋನಿ ಪೊಲೀಸ್ ಠಾಣೆಗೆ ಹಾಜರಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಲು ಮನೀಶ್ ಅವರಿಗೆ ಸೂಚಿಸಿದ್ದಾರೆ.
ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ವ್ಯಕ್ತಿಯ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಬಿಂಬಿಸುವ ವಿಡಿಯೊವನ್ನು ಟ್ವಿಟರ್ನಲ್ಲಿ ಕೆಲವರು ಪೋಸ್ಟ್ ಮಾಡಿದ್ದರು. ಈ ವಿಡಿಯೋದಲ್ಲಿ ಸೆರೆಯಾಗಿರುವ ಘಟನೆ ವೈಯಕ್ತಿಕ ಕಾರಣಗಳಿಂದ ನಡೆದಿರುವ ಘಟನೆ. ಇದರಲ್ಲಿ ಕೋಮುದ್ವೇಷದ ಉದ್ದೇಶ ಇಲ್ಲ. ಆದರೆ ಈ ವಿಡಿಯೊಗಳನ್ನು ಕೋಮು ಸೌಹಾರ್ದ ಕದಡುವ ಉದ್ದೇಶದಿಂದ ಹಂಚಿಕೊಳ್ಳಲಾಗಿದೆ. ಆದರೆ ಈ ಟ್ವೀಟ್ಗಳನ್ನು ಅಳಿಸುವ ಕ್ರಮವನ್ನು ಟ್ವಿಟರ್ ಸಂಸ್ಥೆ ತೆಗೆದು
ಕೊಂಡಿಲ್ಲ ಎಂದು ಎಫ್ಐಆರ್ನಲ್ಲಿ ಹೇಳಲಾಗಿದೆ.
ಇದೇ ಮೊದಲ ಬಾರಿಗೆ, ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳ ಅನ್ವಯ ಸರ್ಕಾರ ಕ್ರಮ ಕೈಗೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.