ಪಣಜಿ: ಮಿತ್ರ ಪಕ್ಷ ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷದ (ಎಂಜಿಪಿ) ಸುದಿನ್ ಧವಾಲಿಕರ್ ಸೇರಿ ಮೂವರು ಶಾಸಕರಿಗೆ ಸಚಿವ ಸ್ಥಾನ ನೀಡುವ ಮೂಲಕ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಶನಿವಾರ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ.
ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಗೋವಾ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಲೈ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಈ ವೇಳೆ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಇತರ ಸಂಪುಟ ಸಚಿವರು ಇದ್ದರು.
ಧವಾಲಿಕರ್ ಜೊತೆ ಬಿಜೆಪಿಯ ನೀಲಕಾಂತ ಹಳರಂಕರ್ ಮತ್ತು ಸುಭಾಷ್ ಫಲ್ದೇಸಾಯಿ ಪ್ರಮಾಣವಚನ ಸ್ವೀಕರಿಸಿದರು.
ಮಾರ್ಚ್ 28 ರಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಇತರ ಎಂಟು ಸಚಿವರೊಂದಿಗೆ ಪ್ರಮಾಣವಚನ ಸ್ವೀಕರಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.