ಪಣಜಿ: ಮಹದಾಯಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ವಾದವನ್ನು ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸರ್ಕಾರದ ಮುಂದೆ ಗಂಭೀರವಾಗಿಯೇ ವಿರೋಧಿಸಲಾಗುತ್ತಿದೆ, ಕರ್ನಾಟಕದ ಬಿಜೆಪಿ ಸರ್ಕಾರದ ಜತೆಗೆ ಕೈಜೋಡಿಸಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಉತ್ತರ ಗೋವಾದ ಗಂಜೆಂನಲ್ಲಿ ಮಂಗಳವಾರ ಬ್ಯಾರೇಜ್ ಒಂದನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಪರಿಸರಕ್ಕೆ ಧಕ್ಕೆ ತರುವ ಯಾವ ಯೋಜನೆಯನ್ನಾದರೂ ಖಂಡತುಂಡವಾಗಿ ವಿರೋಧಿಸಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.