ಪಣಜಿ: ಕಳಸಾ ಬಂಡೂರಿ ಅಣೆಕಟ್ಟೆ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರದ ಪ್ರಮುಖ ಸಚಿವಾಲಯಗಳಲ್ಲಿ ಲಿಖಿತ ಆಕ್ಷೇಪಣೆ ದಾಖಲಿಸಲು ಗೋವಾ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.
‘ಯಾವುದೇ ಕಾರಣಕ್ಕೂ ಕಳಸಾ ಬಂಡೂರಿ ಯೋಜನೆಗೆ ಅನುಮತಿ ನೀಡದಿರಲು ಕೋರಿ 2–3 ದಿನದಲ್ಲಿ ನಾವು ಕೇಂದ್ರದ ಪರಿಸರ ಮತ್ತು ಅರಣ್ಯ ಸಚಿವಾಲಯ, ಜಲಶಕ್ತಿ ಮತ್ತು ಇತರೆ ಸಂಬಂಧಿಸಿದ ಸಚಿವಾಲಯದ ಎದುರು ಲಿಖಿತ ಆಕ್ಷೇಪಣೆ ಸಲ್ಲಿಸಲಿದ್ದೇವೆ’ ಎಂದು ಸಾವಂತ್ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.