ADVERTISEMENT

ಎಂಜಿನ್‌ನಲ್ಲಿ ಕಂಪನ: 160 ಪ್ರಯಾಣಿಕರಿದ್ದ ವಿಮಾನ ಮುಂಬೈನಲ್ಲಿ ತುರ್ತು ಭೂ ಸ್ಪರ್ಶ

​ಪ್ರಜಾವಾಣಿ ವಾರ್ತೆ
Published 10 ಜನವರಿ 2019, 12:52 IST
Last Updated 10 ಜನವರಿ 2019, 12:52 IST
-ಸಾಂದರ್ಭಿಕ ಚಿತ್ರ
-ಸಾಂದರ್ಭಿಕ ಚಿತ್ರ   

ಮುಂಬೈ:ಗೋಏರ್‌ನ ಮುಂಬೈ–ದೆಹಲಿ ವಿಮಾನ ಗುರುವಾರ ತಾಂತ್ರಿಕ ತೊಂದರೆಯ ಕಾರಣ ಮುಂಬೈನ ವಿಮಾನನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ.

ಜಿ8 319 ಜಿಯೊ ವಿಮಾನದ ಎಂಜಿನ್‌ನಲ್ಲಿ ಕಂಪನ ಕಾಣಿಸಿಕೊಂಡಿದ್ದು, ತುರ್ತು ಭೂ ಸ್ಪರ್ಶ ಮಾಡಿದೆ.

ವಿಮಾನದಲ್ಲಿದ್ದ 160 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಮೂಲಗಳು ತಿಳಿಸಿದ್ದಾಗಿ ಎಎನ್‌ಐ ವರದಿ ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.