ADVERTISEMENT

616 ಕೆ.ಜಿ ಬೆಳ್ಳಿ ಆಭರಣ ವಶ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2019, 19:36 IST
Last Updated 10 ಏಪ್ರಿಲ್ 2019, 19:36 IST
   

ಜೈಪುರ: ಅಕ್ರಮವಾಗಿ 616.5 ಕೆ.ಜಿ ಬೆಳ್ಳಿಯ ಆಭರಣ ಸಾಗಿಸುತ್ತಿದ್ದ ಆರು ಜನರನ್ನು ರಾಜಸ್ಥಾನದ ರಾಜಾಸ್‌ಮಂಡ್‌ ಹಾಗೂ ಶಿರೋಹಿ ಜಿಲ್ಲೆಯಲ್ಲಿ ಬುಧವಾರ ಬಂಧಿಸಲಾಗಿದೆ.

ನಾಥದ್ವಾರ–ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರು ತಡೆದು ಪರಿಶೀಲಿಸಿದ ಭಯೋತ್ಪಾದನಾ ನಿಗ್ರಹ ಪಡೆಯು 600 ಕೆ.ಜಿ ಬೆಳ್ಳಿ ಆಭರಣ ಹಾಗೂ ಐವರನ್ನು ವಶಕ್ಕೆ ಪಡೆದಿದೆ ಎಂದು ನಾಥದ್ವಾರ ಪೊಲೀಸ್‌ ಠಾಣೆ ಉಸ್ತುವಾರಿ ಜೀತೇಂದ್ರಕುಮಾರ್‌ ಅಂಚಾಲಿಯಾ ತಿಳಿಸಿದ್ದಾರೆ. ಶಿರೋಹಿಯಲ್ಲಿ ಬಸ್‌ನಲ್ಲಿ ಸಾಗಿಸುತ್ತಿದ್ದ 16.5 ಕೆ.ಜಿ ಬೆಳ್ಳಿ ಗಟ್ಟಿ ಹಾಗೂ ವ್ಯಕ್ತಿಯೊಬ್ಬನನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT