ಬೆಂಗಳೂರು: ಬಿಟ್ಕಾಯಿನ್ ಹಗರಣದಲ್ಲಿ ಸರ್ಕಾರವು ಏನನ್ನೋ ಮುಚ್ಚಿಡಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘13–11–21ರಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಪೊಲೀಸ್ ಕಮಿಷನರ್ ಕಚೇರಿ, ಬಿಟ್ಕಾಯಿ ಪ್ರಕರಣದಲ್ಲಿ (ಅಪರಾಧ ಸಂಖ್ಯೆ 03/2020) ಸಹಾಯ ಕೋರಿ 28–4–21 ರಂದು ಇಂಟರ್ಪೋಲ್ಗೆ ಪತ್ರ ಬರೆದಿರುವುದಾಗಿ ಹೇಳಿದ್ದಾರೆ, ₹23,000 ವಂಚಿಸಿದ ಪ್ರಕರಣದಲ್ಲಿ ಅವರಿಗೆ ಸಹಾಯ ಬೇಕಿತ್ತೇ? ದೂರಿನ ಸಾರಾಂಶವನ್ನು ಏಕೆ ಬಹಿರಂಗಪಡಿಸಿಲ್ಲ ? ಸರ್ಕಾರ ಏನು ಮುಚ್ಚಿಡುತ್ತಿದೆ? ಎಂದು ಪ್ರಶ್ನೆ ಮಾಡಿದ್ದಾರೆ.
ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಅವರು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.