ನವದೆಹಲಿ: ದೇಶದ ಎಲ್ಲಾ ಟೋಲ್ ಪ್ಲಾಜಾಗಳಲ್ಲಿ ಶುಲ್ಕಸಂಗ್ರಹಣೆಯನ್ನು ಬುಧವಾರ ರಾತ್ರಿಯಿಂದಲೇ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ರದ್ದು ಮಾಡಿದೆ.
ಕೊರೊನಾ ವೈರಸ್ ಭೀತಿ ಇರುವ ಈ ಸಂದರ್ಭದಲ್ಲಿ ಅಗತ್ಯ ಸೇವೆಗಳು ತುರ್ತಾಗಿ ಲಭ್ಯವಾಗಬೇಕೆಂಬ ಉದ್ದೇಶಕ್ಕೆ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
‘ಕೋವಿಡ್ 19 ಹಿನ್ನೆಲೆಯಲ್ಲಿ ದೇಶದ ಟೋಲ್ ಪ್ಲಾಜಾಗಳಲ್ಲಿ ಟೋಲ್ ಸಂಗ್ರಹವನ್ನು ತಾತ್ಕಾಲಿಕವಾಗಿ ಸರ್ಕಾರ ನಿರ್ಬಂಧಿಸಿದೆ,’ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ‘ತುರ್ತು ಸೇವೆಗಳಿರುವ ತೊಡಕು ನಿವಾರಿಸಲಷ್ಟೇ ಈ ನಿರ್ಧಾರ ಕೈಗೊಂಡಿಲ್ಲ. ಬದಲಿಗೆ ಸಮಯ ಉಳಿಸುವ ಸಲುವಾಗಿಯೂ ಈ ತೀರ್ಮಾನ ಮಾಡಲಾಗಿದೆ ಎಂದು ಗಡ್ಕರಿ ಹೇಳಿದ್ದಾರೆ.
ರಸ್ತೆಗಳ ನಿರ್ವಹಣೆ ಮತ್ತು ಹೆದ್ದಾರಿ ತುರ್ತು ಸೇವೆಗಳು ಎಂದಿನಂತೇ ಲಭ್ಯವಾಗಲಿವೆ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.