ನವದೆಹಲಿ: ದೇಶದ ಆಹಾರ ಸಂಸ್ಕರಣಾ ಉದ್ಯಮ ವಲಯಕ್ಕೆ ಸಂಬಂಧಿಸಿ ₹ 10,900 ಕೋಟಿ ಮೊತ್ತದ ‘ಉತ್ಪಾದನಾ ಆಧಾರಿತ ಉತ್ತೇಜನಾ ಯೋಜನೆ’ಗೆ (ಪಿಎಲ್ಐ) ಕೇಂದ್ರ ಸರ್ಕಾರ ಬುಧವಾರ ಅನುಮೋದನೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಈ ಯೋಜನೆಗೆ ಅನುಮೋದನೆ ನೀಡಿದೆ. ಈ ಯೋಜನೆಯಿಂದ 2.5 ಲಕ್ಷ ಉದ್ಯೋಗಗಳ ಸೃಷ್ಟಿಯಾಗಲಿದ್ದು, ರಫ್ತು ಉದ್ಯಮದ ಬೆಳವಣಿಗೆಗೆ ನೆರವಾಗಲಿದೆ. ದೇಶದ ಗ್ರಾಹಕರಿಗೆ ಮೌಲ್ಯವರ್ಧಿತ ಉತ್ಪನ್ನಗಳು ಸಹ ಸಿಗಲಿವೆ ಎಂದು ಆಹಾರ ಸಚಿವ ಪೀಯೂಷ್ ಗೋಯಲ್ ಹೇಳಿದರು.
ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಪಿಎಲ್ಐಗೆ ಅನುಮೋದನೆ ನೀಡುವ ಮೂಲಕ ದೇಶದ ರೈತ ಸಮುದಾಯಕ್ಕೆ ಗೌರವ ಸಲ್ಲಿಸಿದಂತಾಗಿದೆ’ ಎಂದರು.
‘ಇತ್ತೀಚೆಗೆ ಮಂಡಿಸಿದ ಬಜೆಟ್ನಲ್ಲಿ 12–13 ವಲಯಗಳಿಗೆ ಪಿಎಲ್ಐ ನೀಡುವುದಾಗಿ ಘೋಷಿಸಲಾಗಿತ್ತು. ಈ ಪೈಕಿ 6 ವಲಯಗಳಿಗೆ ಪಿಎಲ್ಐ ಘೋಷಿಸಲಾಗಿದೆ. ಈಗ ಆಹಾರ ಸಂಸ್ಕರಣಾ ವಲಯಕ್ಕೆ ಸಂಬಂಧಿಸಿದ ಪಿಎಲ್ಐಗೆ ಅನುಮೋದನೆ ನೀಡಲಾಗಿದೆ’ ಎಂದು ವಾರ್ತಾ ಮತ್ತು ಪ್ರಸಾರ ಸಚಿವ ರವಿಶಂಕರ ಪ್ರಸಾದ್ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.