ನವದೆಹಲಿ: ‘ಮುಂಗಾರು ಅಧಿವೇಶನವು ಜುಲೈ ತಿಂಗಳಲ್ಲಿ ಸುಗಮವಾಗಿ ನಡೆಯುವ ವಿಶ್ವಾಸವಿದೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಮಂಗಳವಾರ ತಿಳಿಸಿದ್ದಾರೆ.
ಕೋವಿಡ್–19 ಸಾಂಕ್ರಾಮಿಕ ಕಾಯಿಲೆ ಆರಂಭವಾದ ಬಳಿಕ ಸಂಸತ್ತಿನ ಮೂರು ಅಧಿವೇಶನಗಳನ್ನು ಮೊಟಕುಗೊಳಿಸಲಾಗಿತ್ತು. ಕಳೆದ ವರ್ಷ ಚಳಿಗಾಲದ ಅಧಿವೇಶನವನ್ನು ರದ್ದುಪಡಿಸಲಾಗಿತ್ತು.
ಕಳೆದ ವರ್ಷ ಮುಂಗಾರು ಅಧಿವೇಶನವನ್ನು ಜುಲೈ ಬದಲು ಸೆಪ್ಟೆಂಬರ್ನಲ್ಲಿ ನಡೆಸಲಾಗಿತ್ತು. ಈ ಬಾರಿ ಮುಂಗಾರು ಅಧಿವೇಶನವನ್ನು ನಡೆಸಲು ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.
ಲೋಕಸಭೆ ಮತ್ತು ರಾಜ್ಯಸಭೆಯ ಬಹುತೇಕ ಸದಸ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ, ಕೋವಿಡ್–19 ವಿರುದ್ಧದ ಲಸಿಕೆಯ ಕನಿಷ್ಠ ಒಂದು ಡೋಸ್ ಅನ್ನು ಪಡೆದಿದ್ದಾರೆ. ಹೀಗಾಗಿ, ಜುಲೈನಲ್ಲಿ ಅಧಿವೇಶನ ನಡೆಯುವ ಸಾಧ್ಯತೆಗಳು ಹೆಚ್ಚು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.