ADVERTISEMENT

ಕಾಶ್ಮೀರಿ ವಲಸಿಗರಿಗೆ ಆಸ್ತಿ ವಾಪಸ್: ಸಚಿವ ನಿತ್ಯಾನಂದ ರಾಯ್‌

ಪಿಟಿಐ
Published 6 ಏಪ್ರಿಲ್ 2022, 19:36 IST
Last Updated 6 ಏಪ್ರಿಲ್ 2022, 19:36 IST
ಸಂಸತ್‌ ಭವನ
ಸಂಸತ್‌ ಭವನ   

ನವದೆಹಲಿ: ಕಾಶ್ಮೀರದಿಂದ ವಲಸೆ ಹೋದವರಿಗೆ ಅವರ ಅಸ್ತಿಗಳನ್ನು ಹಿಂದಿರುಗಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದ್ದು, ಈಗಾಗಲೇ 610 ಮಂದಿಗೆ ಆಸ್ತಿಯನ್ನು ವಾಪಸ್‌ ನೀಡಲಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರಾಯ್‌ ಬುಧವಾರ ರಾಜ್ಯಸಭೆಯಲ್ಲಿ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಉತ್ತರಿಸಿದ ಸಚಿವರು, ವಲಸಿಗರ ಆಸ್ತಿಗಳ ಪಾಲಕರಾಗಿ ಜಿಲ್ಲಾಧಿಕಾರಿಗಳನ್ನು ನೇಮಿಸಲಾಗಿದ್ದು, ವಲಸಿಗರ ದೂರುಗಳನ್ನು ಪರಿಹರಿಸಲು ಸರ್ಕಾರ ಪೋರ್ಟಲ್ ಅನ್ನೂ ಪ್ರಾರಂಭಿಸಿದೆ ಎಂದು ಮಾಹಿತಿ ನೀಡಿದರು.

‘ಸರ್ಕಾರ ವಲಸಿಗ ಕಾಶ್ಮೀರಿಗಳಿಗೆ ಆಸ್ತಿಯನ್ನು ಹಿಂದಿರುಗಿಸಲು ಸಮರ್ಥವಾಗಿದೆ. ಈ ನಿಟ್ಟಿನಲ್ಲಿ ನಿರಂತರ ಪ್ರಯತ್ನಗಳೂ ನಡೆಯುತ್ತಿವೆ’ ಎಂದರು.

ADVERTISEMENT

ವಲಸಿಗರ ದೂರು ನೈಜವಾಗಿದ್ದರೆ, ಅವರ ಆಸ್ತಿ ಹಿಂತಿರುಗಿಸಲಾಗುತ್ತದೆ. ಇಲ್ಲಿಯವರೆಗೆ, 610 ಅರ್ಜಿದಾರರ ಆಸ್ತಿಯನ್ನು ಹಿಂದಿರುಗಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.