ನಿಫಾ ವೈರಸ್ (ಪ್ರಾತಿನಿಧಿಕ ಚಿತ್ರ)
ನವದೆಹಲಿ: ಸಾರ್ವಜನಿಕ ಆರೋಗ್ಯ ನಿಯಮಗಳನ್ನು ವ್ಯವಸ್ಥಿತವಾಗಿ ಜಾರಿಗೊಳಿಸಲು ಕೇರಳ ಸರ್ಕಾರಕ್ಕೆ ಸಹಾಯ ಒದಗಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಜಂಟಿ ಪ್ರತಿಸ್ಪಂದನ ತಂಡವನ್ನು ಕೇರಳಕ್ಕೆ ಕಳುಹಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದಲ್ಲಿ ನಿಫಾ ವೈರಸ್ನ 2 ಪ್ರಕರಣಗಳು ಪತ್ತೆಯಾಗಿರುವ ಕಾರಣದಿಂದ ಈ ಬೆಳವಣಿಗೆ ನಡೆದಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.
38 ವರ್ಷದ ಮಹಿಳೆಯೊಬ್ಬರಿಗೆ ನಿಫಾ ಸೋಂಕು ತಗುಲಿರುವುದು ಶುಕ್ರವಾರ ದೃಢಪಟ್ಟಿದೆ. ಜತೆಗೆ ಇತ್ತೀಚೆಗಷ್ಟೇ ಅನಾರೋಗ್ಯದಿಂದ ಮೃತಪಟ್ಟ 18 ವರ್ಷದ ಯುವತಿಗೂ ನಿಫಾ ಸೋಂಕು ತಗುಲಿತ್ತು ಎಂಬುದು ದೃಢಪಟ್ಟಿದೆ. ಈ ಕಾರಣದಿಂದ ರಾಜ್ಯದಲ್ಲಿ ರೋಗ ತಪಾಸಣೆ, ನಿಯಂತ್ರಣ ಕ್ರಮಗಳನ್ನು ಚುರುಕುಗೊಳಿಸಲಾಗಿದೆ.
ಕೇಂದ್ರ ಸಮಗ್ರ ರೋಗ ನಿಯಂತ್ರಣ ತಂಡವೂ ಕೂಡ ರಾಜ್ಯ ಘಟಕದ ಸಂಪರ್ಕದಲ್ಲಿದ್ದು, ರಾಜ್ಯದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿರುವುದಾಗಿ ಹೇಳಿದೆ. ಏತನ್ಮಧ್ಯೆ, ಕೇಂದ್ರದಿಂದ ತಂಡ ನಿಯೋಜಿಸುವ ಪ್ರಸ್ತಾಪ ಬಂದಿದೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.