ADVERTISEMENT

ಸಿಎಎ ನಿಯಮ ರಚನೆಗೆ ಜ.9ರ ತನಕ ಕಾಲಾವಕಾಶ ಕೋರಿದ ಕೇಂದ್ರ ಸರ್ಕಾರ

ಪಿಟಿಐ
Published 27 ಜುಲೈ 2021, 10:52 IST
Last Updated 27 ಜುಲೈ 2021, 10:52 IST
ನಿತ್ಯಾನಂದ ರೈ
ನಿತ್ಯಾನಂದ ರೈ   

ನವದೆಹಲಿ: ‘ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನ್ವಯ ನಿಯಮಗಳನ್ನು ರೂಪಿಸಲು ಮುಂಬರುವ ಜನವರಿ 9 ತನಕ ಕಾಲಾವಕಾಶ ಬೇಕು’ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಲೋಕಸಭೆಗೆ ಮಂಗಳವಾರ ತಿಳಿಸಿದರು.

ಸಿಎಎ ಅನ್ವಯ ನಿಯಮಗಳನ್ನು ರೂಪಿಸಲು ನೀಡಿದ್ದ ಗಡುವನ್ನು ಸರ್ಕಾರ ಮೀರಿದೆಯೇ ಮತ್ತು ಈ ಸಂಬಂಧ ಕೈಗೊಂಡ ಕ್ರಮಗಳ ಬಗ್ಗೆ ಕಾಂಗ್ರೆಸ್‌ ಸಂಸದ ಗೌರವ್‌ ಗೊಗೊಯಿ ಅವರು ಲೋಕಸಭೆಯಲ್ಲಿ ಪ್ರಶ್ನೆ ಕೇಳಿದ್ದರು.

ಇದಕ್ಕೆ ಉತ್ತರಿಸಿದ ನಿತ್ಯಾನಂದ ಅವರು, ಕಾಯ್ದೆಯ ಅಧಿಸೂಚನೆಯನ್ನು 2019ರ ಡಿಸೆಂಬರ್ 12 ರಂದು ಹೊರಡಿಸಲಾಗಿದೆ. 2020ರ ಜನವರಿ 10ರಿಂದ ಕಾಯ್ದೆ ಜಾರಿಗೆ ಬಂದಿದೆ' ಎಂದು ಹೇಳಿದರು.

ADVERTISEMENT

ಪೌರತ್ವ (ತಿದ್ದುಪಡಿ) ಕಾಯ್ದೆಯ ನಿಯಮಗಳನ್ನು ರೂಪಿಸಲು ಜನವರಿ 9ರ ತನಕ ಸಮಯ ನೀಡುವಂತೆ ಲೋಕಸಭೆ ಮತ್ತು ರಾಜ್ಯಸಭೆಯ ಸಮಿತಿಗಳಿಗೆ ಕೋರಲಾಗಿದೆ' ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.