ಜೋಧಪುರ (ರಾಜಸ್ಥಾನ):‘ವಿರೋಧಗಳೇನೇ ಇದ್ದರೂ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ನಿರ್ಧಾರದಿಂದ ಸರ್ಕಾರ ಒಂದಿಂಚೂ ಹಿಂದೆ ಸರಿಯುವುದಿಲ್ಲ,’ ಎಂದು ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರ ಘಟಕದ ಅಧ್ಯಕ್ಷ ಅಮಿತ್ ಶಾ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.
ಪೌರತ್ವ ಕಾಯ್ದೆ ಕುರಿತು ಜಾಗೃತಿ ಮೂಡಿಸುವ ಸಮಾವೇಶಕ್ಕೆ ಜೋಧಪುರದಲ್ಲಿ ಚಾಲನೆ ನೀಡಿದ ಅವರು, ‘ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಕಾಯ್ದೆ ಬಗ್ಗೆ ದೇಶದಲ್ಲಿ ಅಪಪ್ರಚಾರ ನಡೆಸುತ್ತಿವೆ,’ ಎಂದು ಆರೋಪಿಸಿದರು.
‘ಪೌರತ್ವ ಕಾಯ್ದೆ ದೇಶದ ಯಾವೊಬ್ಬ ನಾಗರಿಕರ ಪೌರತ್ವವನ್ನೂ ಕಸಿಯುವುದಿಲ್ಲ. ಬದಲಾಗಿ ಪೌರತ್ವ ನೀಡುತ್ತದೆ,’ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.