ADVERTISEMENT

ಹಿಂದುಳಿದವರ ಸಬಲೀಕರಣಕ್ಕೆ ಸರ್ಕಾರದಿಂದ ಶ್ರಮ: ಪ್ರಧಾನಿ ಮೋದಿ

ಪಿಟಿಐ
Published 28 ಜನವರಿ 2023, 12:57 IST
Last Updated 28 ಜನವರಿ 2023, 12:57 IST
ಭಿಲ್ವಾರಾದಲ್ಲಿ ಭಗವಾನ್ ಶ್ರೀ ದೇವನಾರಾಯಣ ಅವರ 1,111 ನೇ ಅವತಾರ ಮಹೋತ್ಸವದ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದರು  –ಪಿಟಿಐ ಚಿತ್ರ
ಭಿಲ್ವಾರಾದಲ್ಲಿ ಭಗವಾನ್ ಶ್ರೀ ದೇವನಾರಾಯಣ ಅವರ 1,111 ನೇ ಅವತಾರ ಮಹೋತ್ಸವದ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದರು  –ಪಿಟಿಐ ಚಿತ್ರ   

ಜೈಪುರ: ‘ವಂಚಿತ್ ಕೋ ವರಿಯತಾ‘ (ಹಿಂದುಳಿದವರಿಗೆ ಆದ್ಯತೆ) ಎನ್ನುವ ಮಂತ್ರದೊಂದಿಗೆ ನಿರ್ಲಕ್ಷ್ಯಕ್ಕೊಳಗಾದ ಸಮಾಜದ ಪ್ರತಿಯೊಂದು ವರ್ಗವನ್ನು ಸಬಲೀಕರಣಗೊಳಿಸಲು ಕೇಂದ್ರ ಸರ್ಕಾರ ಶ್ರಮಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು.

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಗುರ್ಜರ್‌ ಸಮುದಾಯದ ಜನಪದ ದೇವರು ಭಗವಾನ್ ಶ್ರೀ ದೇವನಾರಾಯಣ ಅವರ 1,111 ನೇ ಅವತಾರ ಮಹೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ಹೋರಾಟ ಮತ್ತು ಇತರ ಚಳವಳಿಗಳಲ್ಲಿ ಗುರ್ಜರ್‌ ಸಮುದಾಯದ ಕೊಡುಗೆ ಅಪಾರ. ಇಂತಹ ವ್ಯಕ್ತಿಗಳಿಗೆ ದೇಶದಲ್ಲಿ ಸಿಗಬೇಕಾದ ಗೌರವ ಸಿಗದೇ ಇರುವುದು ದೌರ್ಭಾಗ್ಯವಾಗಿದೆ. ಆದರೆ ನವ ಭಾರತ ಹಿಂದೆ ಆದ ತಪ್ಪನ್ನು ಸರಿಪಡಿಸಲಿದೆ ಎಂದು ಹೇಳಿದರು.

ADVERTISEMENT

ಭಾರತವನ್ನು ಸೈದ್ದಾಂತಿಕವಾಗಿ ಹಿಮ್ಮೆಟ್ಟಿಸಲು ಅನೇಕ ಪ್ರಯತ್ನಗಳು ನಡೆದರೂ ಅದು ಯಶಸ್ಸು ಕಾಣಲಿಲ್ಲ. ಭಾರತ ಕೇವಲ ಭೂಭಾಗವಲ್ಲ, ನಾಗರಿಕತೆ, ಸಂಸ್ಕೃತಿ, ಸಾಮರಸ್ಯ ಮತ್ತು ಸಾಮರ್ಥ್ಯದ ಅಭಿವ್ಯಕ್ತಿತ್ವವನ್ನು ಒಳಗೊಂಡಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು.

ಭಾರತದ ಶಕ್ತಿ ಮತ್ತು ಪ್ರಾಬಲ್ಯವನ್ನು ಕಂಡು ಜಗತ್ತು ಈಗ ಹೊಸ ಆಶಾಭಾವನೆಯಿಂದ ನೋಡುತ್ತಿದೆ. ಭಾರತವು ಜಾಗತಿಕ ವೇದಿಕೆಗಳಲ್ಲಿ ತನ್ನನ್ನು ತಾನು ಪ್ರತಿಪಾದಿಸಿಕೊಂಡಿದೆ, ಜೊತೆಗೆ ಇತರ ದೇಶಗಳ ಮೇಲಿನ ತನ್ನ ಅವಲಂಬನೆಯನ್ನು ಕಡಿಮೆ ಮಾಡಿಕೊಳ್ಳುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.