ADVERTISEMENT

ಗ್ರೆನೇಡ್‌ ದಾಳಿ: ಇಬ್ಬರು ಪೊಲೀಸರಿಗೆ ಗಾಯ

ಪಿಟಿಐ
Published 17 ಜನವರಿ 2019, 18:47 IST
Last Updated 17 ಜನವರಿ 2019, 18:47 IST

ಶ್ರೀನಗರ: ಶ್ರೀನಗರದ ಜೀರೊ ಸೇತುವೆ ಬಳಿ ಉಗ್ರರು ನಡೆಸಿದ ಗ್ರೆನೇಡ್‌ ದಾಳಿಯಲ್ಲಿ ಇಬ್ಬರು ಸಂಚಾರ ಪೊಲೀಸರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್‌ಬಾಘ್‌ನಲ್ಲಿರುವ ಈ ಸೇತುವೆಯ ಟ್ರಾಫಿಕ್‌ ಸಿಗ್ನಲ್‌ ಬಳಿ ಉಗ್ರರು ಗುರುವಾರ ದಾಳಿ ನಡೆಸಿದ್ದು, ಅವರ ಪತ್ತೆಗೆ ಭದ್ರತಾ ಸಿಬ್ಬಂದಿ ಶೋಧ ಆರಂಭಿಸಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿ ನಡೆದ 100 ಮೀಟರ್ ದೂರದಲ್ಲಿ ನ್ಯಾಷನಲ್ ಕಾನ್ಫರೆನ್ಸ್‌ ಪಕ್ಷದ (ಎನ್‌ಸಿಪಿ) ಮುಖ್ಯ ಕಚೇರಿ ಹಾಗೂ ಆಲ್‌ ಇಂಡಿಯಾ ರೇಡಿಯೊದ ಸ್ಥಳೀಯ ಕಚೇರಿ ಇದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.