ADVERTISEMENT

ಜಮ್ಮು ಕಾಶ್ಮೀರದಲ್ಲಿ ಗ್ರನೇಡ್ ದಾಳಿ: ಆರು ನಾಗರಿಕರಿಗೆ ಗಾಯ

ಪಿಟಿಐ
Published 26 ಅಕ್ಟೋಬರ್ 2021, 7:11 IST
Last Updated 26 ಅಕ್ಟೋಬರ್ 2021, 7:11 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶ್ರೀನಗರ: ಬಂಡಿಪೋರ್‌ ಜಿಲ್ಲೆಯಲ್ಲಿ ಮಂಗಳವಾರ ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಆರು ನಾಗರಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಿಗ್ಗೆ 10.20ರ ಸುಮಾರಿಗೆ ಉಗ್ರರು ಸುಂಬಾಲ್‌ನಲ್ಲಿರುವ ಬಸ್‌ ನಿಲ್ದಾಣದ ಸಮೀಪದಲ್ಲಿದ್ದ ಸೇನಾ ಪಡೆಗಳನ್ನು ಗುರಿಯಾಗಿಸಿ ಗ್ರೆನೇಡ್‌ಗಳನ್ನು ಎಸೆದಿದ್ದಾರೆ. ಗುರಿ ತಪ್ಪಿ ರಸ್ತೆ ಪಕ್ಕದಲ್ಲಿ ಸ್ಫೋಟಗೊಂಡಿವೆ. ಈ ಘಟನೆಯಲ್ಲಿ ಆರು ನಾಗರಿಕರು ಗಾಯಗೊಂಡಿದ್ದಾರೆ‘ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.