ADVERTISEMENT

ಕಾರಿನಡಿ ಸಿಲುಕಿದ್ದ ಬೈಕ್‌ ಸವಾರನನ್ನು 12 ಕಿ.ಮಿ ಎಳೆದೊಯ್ದಿದ್ದ ವ್ಯಕ್ತಿ ಬಂಧನ

ಗುಜರಾತ್‌ನ ಸೂರತ್‌ನಲ್ಲಿ ಘಟನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಜನವರಿ 2023, 5:31 IST
Last Updated 28 ಜನವರಿ 2023, 5:31 IST
   

ಸೂರತ್‌: ಅಪಘಾತಕ್ಕೀಡಾಗಿ ಕಾರಿನಡಿ ಸಿಲುಕಿದ್ದ ಬೈಕ್‌ ಸವಾರನನ್ನು 12 ಕಿ.ಮಿ ದೂರ ಎಳೆದೊಯ್ದು ಕೊಲೆ ಮಾಡಿದ ಚಾಲಕನನ್ನು ಗುಜರಾತ್‌ ಪೊಲೀಸರು ಬಂಧಿಸಿದ್ದಾರೆ.

ಸೂರತ್‌ನ ಹೊರವಲಯ ಪಾಲ್ಸಾನ ಎಂಬಲ್ಲಿ ಡಿಸೆಂಬರ್‌ 18ರಂದು ಈ ಘಟನೆ ನಡೆದಿದ್ದು, ಗುರುವಾರ (ಜ.26) ರಂದು ಆರೋಪಿಯ ಬಂಧನವಾಗಿದೆ.

ಕಟ್ಟಡ ನಿರ್ಮಾಣ ವಲಯದ ಉದ್ಯಮಿಯಾಗಿರುವ ಬಿರೇನ್‌ ಲಾಡುಮೋರ್‌ ಎಂಬವರು ಈ ಕೃತ್ಯ ಎಸಗಿದ್ದಾನೆ. ಘಟನೆ ಬಳಿಕ ಮುಂಬೈ ಹಾಗೂ ರಾಜಸ್ಥಾನದಲ್ಲಿ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ದಂಪತಿಗಳು ಪ್ರಯಾಣಿಸುತ್ತಿದ್ದ ಬೈಕ್‌ಗೆ ಕಾರು ಗುದ್ದಿದ್ದು, ಹಿಂಬದಿಯಲ್ಲಿ ಕುಳಿತಿದ್ದ ಪತ್ನಿ ಸ್ಥಳದಲ್ಲೇ ಮೃತ‍ಪಟ್ಟಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ಸಾಗರ್‌ ಪಾಟೀಲ್‌ ಅವರನ್ನು 12 ಕಿ.ಮಿ ದೂರಕ್ಕೆ ಎಳೆದುಕೊಂಡು ಹೋಗಲಾಗಿದೆ. ಪತ್ನಿಯ ಮೃತದೇಹ ಸಿಕ್ಕ 12 ಕಿ.ಮಿ ದೂರದಲ್ಲಿ ಪತಿಯ ಮೃತದೇಹ ಲಭಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

‘ಕಾರಿನಡಿಗೆ ಬೈಕ್‌ ಸವಾರ ಸಿಲುಕಿದ್ದ ಎಂದು ನನಗೆ ತಿಳಿದಿರಲಿಲ್ಲ. ಅಪಘಾತ ಆದ ಬಳಿಕ ಭಯದಿಂದ ನಾನು ತಪ್ಪಿಸಿಕೊಳ್ಳಲು ಯತ್ನಿಸಿದ್ದೆ‘ ಎಂದು ಆರೋಪಿ ಹೇಳಿದ್ದಾಗಿ ಸೂರತ್‌ ಗ್ರಾಮೀಣ ಪೊಲೀಸ್‌ ವರಿಷ್ಠಾಧಿಕಾರಿ ಇಲೇಶ್‌ ಪಾಟೀಲ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.