ಜ್ಞಾನವಾಪಿ ಮಸೀದಿ
(ಪಿಟಿಐ ಚಿತ್ರ)
ಪ್ರಯಾಗರಾಜ್: ಜ್ಞಾನವಾಪಿ ಮಸೀದಿಯೊಳಗಿನ ಶಿವಲಿಂಗವನ್ನು ಹೊರತುಪಡಿಸಿ ವುಜುಖಾನಾ (ಶುದ್ಧೀಕರಣ ಕೊಳ) ಪ್ರದೇಶದ ಎಎಸ್ಐ ಸಮೀಕ್ಷೆಗೆ ಸಂಬಂಧಿಸಿದ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಆಗಸ್ಟ್ 6 ಕ್ಕೆ ಮುಂದೂಡಿದೆ.
ಶುಕ್ರವಾರ ವಿಚಾರಣೆಯನ್ನು ಕೈಗೆತ್ತಿಕೊಂಡಾಗ, ಸುಪ್ರೀಂ ಕೋರ್ಟ್ನ ಮಧ್ಯಂತರ ಆದೇಶ ಜಾರಿಯಲ್ಲಿದೆ ಎಂದು ವಕೀಲರೊಬ್ಬರು ನ್ಯಾಯಾಲಯದ ಗಮನಕ್ಕೆ ತಂದರು.
ಯಾವುದೇ ನ್ಯಾಯಾಲಯವು ಮುಂದಿನ ನಿರ್ದೇಶನಗಳವರೆಗೆ ಸಮೀಕ್ಷೆಗೆ ಆದೇಶಿಸುವ ಸೇರಿ ಇನ್ಯಾವುದೇ ಮಧ್ಯಂತರ ಆದೇಶ ಅಥವಾ ತೀರ್ಪುಗಳನ್ನು ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ ಹೇಳಿದೆ.
ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯೊಳಗಿನ ಕಾರಂಜಿ ಎಂದು ಮುಸ್ಲಿಮರು ಹೇಳುವ, ಶಿವಲಿಂಗ ಎಂದು ಹಿಂದೂಗಳು ವಾದಿಸುವ ರಚನೆಯನ್ನು ಹೊರತುಪಡಿಸಿ, ವುಜುಖಾನಾ (ಶುದ್ಧೀಕರಣ) ಪ್ರದೇಶವನ್ನು ಸಮೀಕ್ಷೆ ಮಾಡಲು ಭಾರತೀಯ ಪುರಾತತ್ವ ಇಲಾಖೆಗೆ ಅನುಮತಿ ನೀಡಬೇಕು ಎಂದು ಕೋರಿದ್ದ ಅರ್ಜಿಯನ್ನು ವಜಾ ಮಾಡಿದ ವಾರಾಣಸಿ ನ್ಯಾಯಾಧೀಶರ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.