ADVERTISEMENT

ಜ್ಞಾನವಾಪಿ ಮಸೀದಿ ತೀರ್ಪು ಸೆ.12ಕ್ಕೆ ಪ್ರಕಟಗೊಳ್ಳುವ ನಿರೀಕ್ಷೆ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2022, 13:20 IST
Last Updated 11 ಸೆಪ್ಟೆಂಬರ್ 2022, 13:20 IST
ಜ್ಞಾನವಾಪಿ ಮಸೀದಿ
ಜ್ಞಾನವಾಪಿ ಮಸೀದಿ   

ಲಖನೌ: ಕಾಶಿ ವಿಶ್ವನಾಥ– ಜ್ಞಾನವಾಪಿ ಮಸೀದಿ ಆವರಣದಲ್ಲಿ ಇದೆ ಎಂದು ಹೇಳಲಾದ ಶೃಂಗಾರ ಗೌರಿ ದೇವಾಲಯದಲ್ಲಿ ಪ್ರತಿದಿನ ಪೂಜೆ ಸಲ್ಲಿಸಲು ಅವಕಾಶ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ತೀರ್ಪನ್ನು ವಾರಾಣಸಿ ಜಿಲ್ಲಾ ನ್ಯಾಯಾಲಯವು ಸೋಮವಾರ ಪ್ರಕಟಿಸಿವ ನಿರೀಕ್ಷೆ ಇದೆ.

ಮಸೀದಿಯ ಹೊರ ಗೋಡೆಯೊಂದರ ಬಳಿ ಹಿಂದೂ ದೇವತೆಗಳ ವಿಗ್ರಹಗಳಿವೆ. ಅವುಗಳಿಗೆ ದಿನನಿತ್ಯವೂ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕೋರಿಹಿಂದೂ ಧರ್ಮಕ್ಕೆ ಸೇರಿದ ಐವರು ಮಹಿಳೆಯರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಜಿಲ್ಲಾ ನ್ಯಾಯಾಧೀಶ ಅಜಯ್‌ ಕೃಷ್ಣ ವಿಶ್ವೇಶ್‌ ಅವರು ಈ ಪ್ರಕರಣದ ತೀರ್ಪನ್ನು ಸೆಪ್ಟೆಂಬರ್‌ 12ರ ವರೆಗೆ ಕಾಯ್ದಿರಿಸಿಆಗಸ್ಟ್‌ 24ರಂದು ತೀರ್ಪು ನೀಡಿದ್ದರು.

ಇದಕ್ಕೂ ಮೊದಲು, ಮಸೀದಿಯ ಆವರಣದಲ್ಲಿ ವಿಡಿಯೊಗ್ರಫಿ ಸಮೀಕ್ಷೆ ನಡೆಸಲು ಕೋರ್ಟ್ ಆದೇಶಿಸಿತ್ತು. ಸಮೀಕ್ಷೆಯ ವರದಿಯನ್ನು ಈಗಾಗಲೇ ಕೋರ್ಟ್‌ಗೆ ನೀಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.