ಬೆಂಗಳೂರು: ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಪ್ರಧಾನಿ ನರೇಂದ್ರ ಮೋದಿಯವರ ನಿರ್ಧಾರವನ್ನು ಮಾಜಿ ಪ್ರಧಾನಿ ದೇವೇಗೌಡ ಸ್ವಾಗತಿಸಿದ್ದಾರೆ.
ಮೂರೂ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಪ್ರಧಾನಿ ನರೇಂದ್ರ ಮೋದಿಯವರ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ಈ ಕಾಯ್ದೆಗಳ ವಿರುದ್ಧ ಪ್ರಜಾಸತ್ತಾತ್ಮಕ ಹೋರಾಟ ರೂಪಿಸಿದ ರೈತ ಸಮೂಹಕ್ಕೆ ನನ್ನ ಸಲ್ಯೂಟ್ ಎಂದು ಟ್ವೀಟ್ ಮಾಡಿದ್ದಾರೆ.
ಸಂಸದೀಯ ವ್ಯವಸ್ಥೆಯಲ್ಲಿ ವಾದ ಮಂಡನೆ ಮತ್ತು ಚರ್ಚೆಗಳು ಅತ್ಯಂತ ಪ್ರಮುಖ. ಸೆಪ್ಟೆಂಬರ್ 2020ರಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ರಾಜ್ಯಸಭೆಯಲ್ಲಿ ನಾನು ಮಾಡಿದ ಭಾಷಣದ ವಿವರ ಇಲ್ಲಿದೆ ಎಂದು ಹೇಳಿಕೆಯ ಪತ್ರವನ್ನು ಪೋಸ್ಟ್ ಮಾಡಿದ್ದಾರೆ.
ಯಾವುದೇ ಒತ್ತಡಕ್ಕೂ ಮಣಿಯದೇ ಹೋರಾಟ ನಡೆಸಿದ ಪ್ರತಿಯೊಬ್ಬ ರೈತರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಬಿಜೆಪಿಯ ಕ್ರೂರತ್ವವನ್ನು ಮೆಟ್ಟಿನಿಂತು ಹೋರಾಟ ನಡೆಸಿದ್ದೀರಿ. ಇದು ನಿಮ್ಮ ವಿಜಯವಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.